Mandya: ಮತ್ತೆ ಜಿಲ್ಲೆಯಲ್ಲಿ ಭ್ರೂಣ ಹತ್ಯೆ.!

ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಮಾವಿನಕೆರೆ ಗ್ರಾಮದ ತೋಟದ ಮನೆಯಲ್ಲಿ ಹೆಣ್ಣು ಭ್ರೂಣಿನ ಹತ್ಯೆ ದಂಧೆಕನಡೆಯುತ್ತಿರುವುದಾಗಲೇ ಆರೋಗ್ಯ ಇಲಾಖೆ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಇಬ್ಬರು ಆರೋಪಿಗಳು ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.
ಗುರುವಾರ ತಡರಾತ್ರಿ ಜಿಲ್ಲಾ ಆರೋಗ್ಯ ಅಧಿಕಾರಿ (DHO) ಡಾ.ಮೋಹನ್ ನೇತೃತ್ವದಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದು, ದಾಳಿ ವೇಳೆ ಮನೆಯಲ್ಲಿ ಅಬಾರ್ಷನ್ ಕಿಟ್, ಸ್ಕ್ಯಾನಿಂಗ್ ಮಷಿನ್ ಪತ್ತೆಯಾಗಿದೆ. ಇದೇ ವೇಳೆ ಸ್ಥಳದಲ್ಲಿ ಹಾಸನ ಮೂಲದ ಗರ್ಭಿಣಿಯೂ ಇದ್ದರು. ಭ್ರೂಣಲಿಂಗ ಪತ್ತೆಗಾಗಿ ಗರ್ಭಿಣಿಯನ್ನು ಕರೆತರಲಾಗಿತ್ತು. ಗರ್ಭಿಣಿ ಮೂರನೇ ಹೆಣ್ಣು ಭ್ರೂಣ ಅಬಾರ್ಷನ್ಗೆ ಬಂದಿದ್ದರು ಎಂದು ತಿಳಿದುಬಂದಿದೆ.
ದಾಳಿ ವೇಳೆ ಅಬಾರ್ಷನ್ ಕಿಟ್, ಸ್ಕ್ಯಾನಿಂಗ್ ಯಂತ್ರವನ್ನು ಸೀಜ್ ಮಾಡಿದ ಪೊಲೀಸರು, ಗರ್ಭಿಣಿಯ ಪತಿಯನ್ನು ಬಂಧಿಸಿದ್ದಾರೆ. ಸ್ಕ್ಯಾನಿಂಗ್ ಮಾಡುತ್ತಿದ್ದ ಪ್ರಮುಖ ಆರೋಪಿ ಅಭಿಷೇಕ್ ಪರಾರಿಯಾಗಿದ್ದಾನೆ. ಮನೆ ಮಾಲೀಕ ಧನಂಜಯ್ ಆರೋಗ್ಯ ಇಲಾಖೆಯ ಗ್ರೂಪ್ ಡಿ ಸಿಬ್ಬಂದಿ ಎನ್ನಲಾಗಿದೆ.
ವೆಬ್ ಡೆಸ್ಕ್
ಫೋಕಸ್ ಕರ್ನಾಟಕ
ನಿಮ್ಮ ಪ್ರತಿಕ್ರಿಯೆ ಏನು?






