Mangaluru Dinesh: 'ಕಿರಿಕ್ ಪಾರ್ಟಿ', 'ಕೆಜಿಎಫ್' ಸಿನಿಮಾಗಳ ಖ್ಯಾತಿಯ ನಟ ನಿಧನ!
ರಂಗಭೂಮಿ ಕಲಾವಿದ, ಚಿತ್ರ ನಟ ಮತ್ತು ಕಲಾ ನಿರ್ದೇಶಕರಾಗಿದ್ದ ದಿನೇಶ್ ಮಂಗಳೂರು ಇಂದು ಬೆಳಗಿನ ಜಾವ ಕುಂದಾಪುರದಲ್ಲಿ ನಿಧನರಾಗಿದ್ದಾರೆ.
ಕನ್ನಡ ಚಿತ್ರರಂಗದ ಪ್ರಮುಖ ಪೋಷಕ ನಟರಾಗಿದ್ದ ದಿನೇಶ್ ಮಂಗಳೂರು, ಕಳೆದ ಒಂದು ವರ್ಷದಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಇಂದು ಸಂಜೆ ಪಾರ್ಥಿವ ಶರೀರವನ್ನು ಬೆಂಗಳೂರಿಗೆ ತರಲಾಗಿದ್ದು, ನಾಳೆ ಸುಮನಹಳ್ಳಿ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ.
‘ರಿಕ್ಕಿ’, ‘ಉಳಿದವರು ಕಂಡಂತೆ’, ‘ಕೆಜಿಎಫ್ ಚಾಪ್ಟರ್ 1’, ‘ಕೆಜಿಎಫ್ ಚಾಪ್ಟರ್ 2’, ‘777 ಚಾರ್ಲಿ’ ಸೇರಿದಂತೆ ಅನೇಕ ಚಿತ್ರಗಳಲ್ಲಿ ಅವರು ಗಮನಾರ್ಹ ಪಾತ್ರ ನಿರ್ವಹಿಸಿದ್ದರು.
ನಿಮ್ಮ ಪ್ರತಿಕ್ರಿಯೆ ಏನು?