MLA Munirathna: ಪರಪ್ಪನ ಅಗ್ರಹಾರ ಜೈಲಿನಿಂದ ಬಿಜೆಪಿ ಶಾಸಕ ಬಿಡುಗಡೆ!

ಅಕ್ಟೋಬರ್ 16, 2024 - 12:01
 0  9
MLA Munirathna: ಪರಪ್ಪನ ಅಗ್ರಹಾರ ಜೈಲಿನಿಂದ ಬಿಜೆಪಿ ಶಾಸಕ ಬಿಡುಗಡೆ!

ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ಬಿಜೆಪಿ ಶಾಸಕ ಮುನಿರತ್ನಗೆ ಜಾಮೀನು ಸಿಕ್ಕಿದ್ದು, ಇಂದು ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಮಾಧ್ಯಮಗಳಿಗೆ ಯಾವುದೇ ಪ್ರತಿಕ್ರಿಯೆ ನೀಡದೆ ಮುನಿರತ್ನ ಅವರು ಕಾರಿನಲ್ಲಿ ತೆರಳಿದ್ದಾರೆ.

ನಿನ್ನೆ ಜೈಲಧಿಕಾರಿಗಳಿಗೆ ಜಾಮೀನು ಪ್ರತಿ ತಡವಾಗಿ ತಲುಪಿತ್ತು. ಹೀಗಾಗಿ ನಿನ್ನೆ ಬಿಡುಗಡೆ ಆಗಿರಲಿಲ್ಲ. ಇಂದು ಬಿಡುಗಡೆಯಾಗುತ್ತಿದ್ದಂತೆ ಕಾರಿನಲ್ಲಿ ತಮ್ಮ ಮನೆಗೆ ಶಾಸಕ ಮುನಿರತ್ನ ತೆರಳಿದ್ದಾರೆ. ಸದ್ಯ ಮುನಿರತ್ನ ಬಿಡುಗಡೆ ಹಿನ್ನಲೆ ವೈಯಾಲಿಕಾವಲ್ ನಿವಾಸದ ಬಳಿ ಬೆಂಬಲಿಗರು ಸಂಭ್ರಮಿಸುತ್ತಿದ್ದಾರೆ.

ಈಗಾಗಲೇ ಗುತ್ತಿಗೆದಾರನಿಗೆ ಜೀವ ಬೆದರಿಕೆ ಮತ್ತು ಜಾತಿನಿಂದನೆ ಆರೋಪದ ಪ್ರಕರಣದಲ್ಲಿ ಮುನಿರತ್ನ ಅವರು ಜಾಮೀನು ಪಡೆದುಕೊಂಡಿದ್ದಾರೆ. ಇದರ ಬೆನ್ನಲ್ಲೆ ಅತ್ಯಾಚಾರ ಆರೋಪ ಪ್ರಕರಣದಲ್ಲಿ ಮುನಿರತ್ನ ಬಂಧನ ಮಾಡಲಾಗಿತ್ತು. ಈ ಪ್ರಕರಣದಲ್ಲಿ ಮುನಿರತ್ನ ಅವರು ಎ1 ಆರೋಪಿಯಾಗಿದ್ದಾರೆ. ಉಳಿದಂತೆ ಮುನಿರತ್ನ ಪ್ರಕರಣದಲ್ಲಿ ಬಂಧನ ಆಗಿದ್ದ ಲೋಹಿತ್, ಕಿರಣ್ ಹಾಗೂ ಮಂಜುನಾಥ್​ಗೆ ಈಗಾಗಲೇ ಜಾಮೀನು ಮಂಜೂರು ಆಗಿದೆ.

ವೆಬ್ ಡೆಸ್ಕ್
ಫೋಕಸ್ ಕರ್ನಾಟಕ

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow