Moral Policing In Bengaluru: ಸ್ಕೂಟರ್ ಮೇಲೆ ಕೂತಿದ್ದ ಯುವಕ-ಯುವತಿಗೆ ಮೇಲೆ ಅಟ್ಯಾ*ಕ್: ಐವರು ಬಂಧನ

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಯುವಕ ಮತ್ತು ಯುವತಿ ಮೇಲೆ ನೈತಿಕ ಪೊಲೀಸ್ಗಿರಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಚಂದ್ರಾಲೇಔಟ್ನ ಪಾರ್ಕ್ ಬಳಿ ಬೆಳಗ್ಗೆ ಸ್ಕೂಟರ್ನಲ್ಲಿ ಕುಳಿತು ಮಾತನಾಡುತ್ತಿದ್ದ ಯುವಕ-ಯುವತಿಯನ್ನು ಗುಂಪೊಂದು ಬಂದು ಕಿರುಕುಳ ನೀಡಿದ್ದಾರೆ.
ಮಹೀಮ್, ಅಫ್ರೀದಿ, ವಾಸೀಮ್, ಅಂಜುಮ್ ಬಂಧಿತರು. ಕಳೆದ 3 ದಿನಗಳ ಹಿಂದೆ ತನ್ನ ಸ್ನೇಹಿತನ ಜೊತೆ ಬುರ್ಖಾ ಧರಿಸಿ ಬೈಕ್ನಲ್ಲಿ ಯುವತಿ ಕೂತು ಮಾತನಾಡುತ್ತಿದ್ದಳು. ಈ ವೇಳೆ ಸ್ಥಳಕ್ಕೆ ಬಂದ ಐವರು ಮುಸ್ಲಿಂ ಯುವಕರ ಗುಂಪು, ಬುರ್ಖಾ ಧರಿಸಿ ಹಿಂದೂ ಯುವಕನ ಜೊತೆ ಬೈಕ್ನಲ್ಲಿ ಯಾಕೆ ಕೂತಿದ್ಯಾ? ನಿನಗೆ ಮಾನ ಮರ್ಯಾದೆ ಇಲ್ವಾ? ನಿಮ್ಮ ಮನೆಯವರ ಫೋನ್ ನಂಬರ್ ಕೊಡು ಎಂದು ಕ್ಯಾತೆ ತೆಗೆದಿದ್ದರು.
ಆ ಸಂದರ್ಭದಲ್ಲಿ ಯುವತಿ, ನನ್ನ ಕ್ಲಾಸ್ಮೇಟ್ ಜೊತೆ ನಾನು ಮಾತನಾಡುತ್ತಿದ್ದೇನೆ. ನಮ್ಮ ಮನೆಯವರ ನಂಬರ್ ನಿಮಗ್ಯಾಕೆ ಕೊಡಬೇಕು ಎಂದು ಪ್ರತ್ಯುತ್ತರ ನೀಡಿದ್ದಳು. ಯುವತಿ ಜೊತೆಗಿದ್ದ ಯುವಕನ ಮೇಲೆ ಹಲ್ಲೆಗೆ ಯತ್ನಿಸಿದ್ದಲ್ಲದೆ, ಆರೋಪಿಗಳು ಯುವಕ ಹಾಗೂ ಯುವತಿಯು ಬೈಕ್ನಲ್ಲಿ ಕೂತು ಮಾತನಾಡುತ್ತಿದ್ದ ವೀಡಿಯೋ ವೈರಲ್ ಮಾಡಿದ್ದರು. ಸದ್ಯ ಘಟನೆ ಸಂಬಂಧ ಚಂದ್ರಾಲೇಔಟ್ ಪೊಲೀಸರು ಐವರನ್ನು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ.
ನಿಮ್ಮ ಪ್ರತಿಕ್ರಿಯೆ ಏನು?






