Muda Case Hearing: ಇಂದಿನ ಕೋರ್ಟ್ ತೀರ್ಪಿನ ಮೇಲೆ ಸಿಎಂ ಮುಂದಿನ ಭವಿಷ್ಯ!

ಮುಡಾ ಹಗರಣದ ತನಿಖೆಯನ್ನು ಸಿಬಿಐಗೆ ವರ್ಗಾಯಿಸುವಂತೆ ಆರ್ಟಿಐ ಕಾರ್ಯಕರ್ತೆ ಸ್ನೇಹಮಯಿ ಕೃಷ್ಣ ಅವರು ಸಲ್ಲಿಸಿರುವ ಅರ್ಜಿಯ ವಿಚಾರಣೆ ಹೈಕೋರ್ಟ್ನಲ್ಲಿ ಇಂದು ನಡೆಯಲಿದೆ. ಇಂದು ಬಹುತೇಕ ನ್ಯಾಯಾಲಯದಿಂದ ಆದೇಶ ಬರುವ ಸಾಧ್ಯತೆ ಇದೆ.
ಈಗಾಗಲೇ ಮುಡಾ ಬಗ್ಗೆ ಲೋಕಾಯುಕ್ತ ಹಾಗೂ ಇಡಿ ತನಿಖೆ ನಡೆಸುತ್ತಿವೆ. ಈ ನಡುವೆ ಪ್ರಕರಣವನ್ನು ಸಿಬಿಐಗೆ ನೀಡಿದ್ರೆ ಸಿಎಂ ಸಿದ್ದರಾಮಯ್ಯಗೆ ಮತ್ತಷ್ಟು ಸಂಕಷ್ಟ ಎದುರಾಗಬಹುದು ಎನ್ನಲಾಗಿದೆ. ಸಿದ್ದರಾಮಯ್ಯ ಪರ ಅಭಿಷೇಕ್ ಮನು ಸಿಂಘ್ವಿ, ಪ್ರೊ ರವಿವರ್ಮ ಕುಮಾರ್ ವಾದ ಮಂಡಿಸಲಿದ್ದು, ದೂರುದಾರರ ಪರ ವಕೀಲ ರಾಘವನ್ ವಾದಿಸಲಿದ್ದಾರೆ.
ಲೋಕಾಯುಕ್ತ ಪೊಲೀಸರು ಸಲ್ಲಿಸಬೇಕಿದ್ದ ತನಿಖೆಯ ಅಂತಿಮ ವರದಿ ಗಡುವನ್ನು ಹೈಕೋರ್ಟ್ ಜನವರಿ 28ರವರೆಗೆ ವಿಸ್ತರಿಸಿದೆ.ಪ್ರಕರಣದ ಬಗ್ಗೆ ಇಂದು ಅಂತಿಮ ತೀರ್ಪು ಬರುವ ವಿಶ್ವಾಸವಿದೆ. ಸಿಬಿಐಗೆ ವಹಿಸಲು ಅವಶ್ಯಕವಿರುವ ದಾಖಲೆಗಳನ್ನು ನೀಡಲಾಗಿದೆ.
ಕೋರ್ಟ್ಗೆ ಮನವಿ ಮಾಡಿದ ನಂತರ ಸಾಕಷ್ಟು ಬೆಳವಣಿಗೆ ಆಗಿದೆ. ನನಗೆ ಆಮಿಷವೊಡ್ಡಲಾಗಿದೆ, ಒತ್ತಡ, ಬೆದರಿಕೆ ಕೂಡ ಹಾಕಲಾಗಿದೆ. ಈ ಎಲ್ಲಾ ವಿಚಾರಗಳನ್ನು ನ್ಯಾಯಾಲಯದ ಗಮನಕ್ಕೆ ತಂದಿದ್ದೇವೆ. ಲೋಕಾಯುಕ್ತ ತನಿಖೆ ಬಗ್ಗೆ ವಿಶ್ವಾಸವಿಲ್ಲ ಎಂದು ದೂರುದಾರ ಸ್ನೇಹಮಯಿ ಕೃಷ್ಣ ಹೇಳಿದರು.
ನಿಮ್ಮ ಪ್ರತಿಕ್ರಿಯೆ ಏನು?






