Muda Case: ಪ್ರಾಸಿಕ್ಯೂಷನ್ ಪ್ರಶ್ನಿಸಿ ಹೈಕೋರ್ಟ್ʼಗೆ ಸಿಎಂ ಅರ್ಜಿ: ವಿಚಾರಣೆ ಮುಂದೂಡಿಕೆ

ಡಿಸೆಂಬರ್ 5, 2024 - 13:54
 0  9
Muda Case: ಪ್ರಾಸಿಕ್ಯೂಷನ್ ಪ್ರಶ್ನಿಸಿ ಹೈಕೋರ್ಟ್ʼಗೆ ಸಿಎಂ ಅರ್ಜಿ: ವಿಚಾರಣೆ ಮುಂದೂಡಿಕೆ

ಬೆಂಗಳೂರು: ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆ ಹೈಕೋರ್ಟ್‌ನಲ್ಲಿ ನಡೆಯಿತು. ಅರ್ಜಿದಾರರ ವಾದ ಆಲಿಸಿದ ಕೋರ್ಟ್ ಪ್ರತಿವಾದಿಗಳಿಗೆ ನೋಟಿಸ್ ಜಾರಿಗೆ ಆದೇಶ ನೀಡಿ ಜನವರಿ 25ಕ್ಕೆ ವಿಚಾರಣೆ ಮುಂದೂಡಿದೆ. ಮುಡಾದಿಂದ ತಮ್ಮ ಕುಟುಂಬಸ್ಥರಿಗೆ ಬದಲಿ ನಿವೇಶನ ಪಡೆದ ಪ್ರಕ್ರಿಯೆಯಲ್ಲಿ ಅಕ್ರಮ ಎಸಗಿದ ಆರೋಪದಲ್ಲಿ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದ ರಾಜ್ಯಪಾಲರ ಕ್ರಮ ಎತ್ತಿ ಹಿಡಿದಿದ್ದ ಹೈಕೋರ್ಟ್​​ ಏಕಸದಸ್ಯ ಪೀಠದ ಆದೇಶವನ್ನು ಪ್ರಶ್ನಿಸಿ ಸಿಎಂ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು.

ದೂರುದಾರ ಸ್ನೇಹಮಯಿ ಕೃಷ್ಣ ಪರ ವಕೀಲ ಕೆ.ಜಿ ರಾಘವನ್ ವಾದ ಮಂಡಿಸಿ, ಹೈಕೋರ್ಟ್ ಏಕಸದಸ್ಯ ಪೀಠ ಕೇವಲ ನೋಟಿಸ್ ಜಾರಿಗೊಳಿಸಿದೆ. ಅಲ್ಲಿನ ವಿಚಾರಣೆಗೂ ಈ ಕೇಸ್ ಗೂ ಸಂಬಂಧವಿಲ್ಲ ಎಂದರು. ಅರ್ಜಿ ವಿಚಾರಣೆ ನಡೆಸಿದ ಮುಖ್ಯನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆ.ವಿ.ಅರವಿಂದ್ ಅವರಿದ್ದ ಪೀಠ ಈ ಆದೇಶ ನೀಡಿ, ವಿಚಾರಣೆಯನ್ನು ಜನವರಿ 25ಕ್ಕೆ ಮುಂದೂಡಿತು.

 

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow