Muda Clean Chit: ಸಿದ್ದರಾಮಯ್ಯ ಅವರ ಭವಿಷ್ಯ, ಅದೃಷ್ಟ ಗಟ್ಟಿಯಾಗಿದೆ: ಸಿಎಂ ಪರ ಜಿ.ಟಿ.‌ ದೇವೇಗೌಡ ಬ್ಯಾಟಿಂಗ್

ಫೆಬ್ರವರಿ 20, 2025 - 17:20
 0  13
Muda Clean Chit: ಸಿದ್ದರಾಮಯ್ಯ ಅವರ ಭವಿಷ್ಯ, ಅದೃಷ್ಟ ಗಟ್ಟಿಯಾಗಿದೆ: ಸಿಎಂ ಪರ ಜಿ.ಟಿ.‌ ದೇವೇಗೌಡ ಬ್ಯಾಟಿಂಗ್

ಮೈಸೂರು: ಇತ್ತಿಚಿಗೆ ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಪರವಾಗಿ ಬ್ಯಾಟಿಂಗ್ ಮಾಡಿದ ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ ದೇವೇಗೌಡ ಮತ್ತೆ ಸಿದ್ದರಾಮಯ್ಯ ಅವರ ಭವಿಷ್ಯ ಮತ್ತು ಅದೃಷ್ಟ ಎರಡು ಗಟ್ಟಿಯಾಗಿದೆ ಎಂದು ಸಿಎಂ ಪರ ಜಿ.ಟಿ.‌ ದೇವೇಗೌಡ ಭರ್ಜರಿ ಬ್ಯಾಟಿಂಗ್ ಮಾಡಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ 1983ರಲ್ಲಿ ಅದೃಷ್ಟದಿಂದ ಶಾಸಕರಾದರು. ಅವರ ಭವಿಷ್ಯ ಅದೃಷ್ಟ ಗಟ್ಟಿಯಾಗಿಯೇ ಸಾಗಿದೆ.

ಸಿದ್ದರಾಮಯ್ಯರಿಗೆ ಇರುವಂತಹ ಅದೃಷ್ಟ ಬೇರೆ ಯಾರಿಗೂ ಇಲ್ಲ. ಡಿಕೆಶಿ ಅವರು ಖಂಡಿತಾ ಒಂದು ದಿನ ಸಿಎಂ ಆಗುತ್ತಾರೆ. ಆದರೆ ಅದು ಯಾವಾಗ ಅಂತಾ ಗೊತ್ತಿಲ್ಲ ಡಿಕೆ ಸಿಎಂ ಆಗಬೇಕಾದರೆ ಸಿದ್ದರಾಮಯ್ಯ ಬೆಂಬಲ ಬೇಕು. 10 ಶಾಸಕರನ್ನು ಇಟ್ಟುಕೊಂಡು ಯಾರು ಸಿಎಂ‌ ಆಗಲು ಸಾಧ್ಯವಿಲ್ಲ. ಕಾಂಗ್ರೆಸ್ ಸರ್ಕಾರ ಬಿದ್ದು ಹೋಗುತ್ತೆ., ಸಿದ್ದರಾಮಯ್ಯ ರಾಜೀನಾಮೆ ಕೊಡುತ್ತಾರೆ ಎಂದು ಕೇಳಿ ಕೇಳಿ ಜನಕ್ಕೂ ಸಾಕಾಗಿದೆ ಬಿಡಿ ಎಂದು ಜಿ ಟಿ ದೇವೇಗೌಡ ಹೇಳಿದರು.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow