Muda scam: ಲೋಕಾಯುಕ್ತ ವಿಚಾರಣೆಗೆ ಹಾಜರಾದ CM ಸಿದ್ದರಾಮಯ್ಯ!

ಮೈಸೂರು ನಗರದ ಶೇಷಾದ್ರಿ ಅಯ್ಯರ್ ರಸ್ತೆಯಲ್ಲಿರುವ ಲೋಕಾಯುಕ್ತ ಕಚೇರಿಗೆ ಸಿಎಂ ಸಿದ್ದರಾಮಯ್ಯ ಅವರು ಕಾರು ಮೂಲಕ ಆಗಮಿಸಿದ್ದಾರೆ. ಬಳಿಕ ಮುಡಾ ಕೇಸ್ಗೆ ಸಂಬಂಧ ಪಟ್ಟಂತೆ ಲೋಕಾಯುಕ್ತ ಎಸ್ಪಿ ಉದೇಶ್ ಮುಂದೆ ಸಿಎಂ ವಿಚಾರಣೆಗೆ ಹಾಜರಾಗಿದ್ದಾರೆ. ಈ ಪ್ರಕರಣದಲ್ಲಿ ಸಿದ್ದರಾಮಯ್ಯ ಅವರು ಎ1 ಆರೋಪಿಯಾಗಿದ್ದು ಈ ಹಿನ್ನೆಲೆಯಲ್ಲಿ ಕೋರ್ಟ್ ಆದೇಶದಂತೆ ಲೋಕಾಯುಕ್ತ ಅಧಿಕಾರಿಗಳು ತನಿಖೆಯನ್ನು ಕೈಗೆತ್ತಿಕೊಂಡಿದ್ದಾರೆ.
ಈ ನಡುವೆ ಸಿದ್ದರಾಮಯ್ಯ ಅವರು ವಿಚಾರಣೆಗೆ ಹಾಜರಾಗಿರುವ ಹಿನ್ನೆಲೆಯಲ್ಲಿ ಮೈಸೂರು ಲೋಕಾಯುಕ್ತ ಕಚೇರಿ ಸುತ್ತಮುತ್ತ ನಗರ ಪೊಲೀಸರು ಬಿಗಿ ಭದ್ರತೆ ನಿಯೋಜಿಸಿದ್ದಾರೆ. ನಗರದ ಕೃಷ್ಣ ವಿಲಾಸ ರಸ್ತೆ ಮತ್ತು ದಿವಾನ್ಸ್ ರಸ್ತೆ ಜಂಕ್ಷನ್ ನಲ್ಲಿರುವ ಲೋಕಾಯುಕ್ತ ಕಚೇರಿ ಸಂಪರ್ಕಿಸುವ ರಸ್ತೆಗಳನ್ನು ಬಂದ್ ಮಾಡಲಾಗಿದೆ.
ನಿಮ್ಮ ಪ್ರತಿಕ್ರಿಯೆ ಏನು?






