MUDA Scam | ಇಂದಿನಿಂದ ಕಾನೂನು ಸಮರ – ಸಿಎಂ ವಾದ ಏನು?

ಆಗಸ್ಟ್ 19, 2024 - 10:32
 0  11
MUDA Scam | ಇಂದಿನಿಂದ ಕಾನೂನು ಸಮರ – ಸಿಎಂ  ವಾದ ಏನು?
Focus Karnataka SIdaramaih Prosecution

ಮುಡಾ ಹಗರಣ (MUDA Scam) ಸಂಬಂಧ ರಾಜ್ಯಪಾಲರು ಸಿಎಂ ಸಿದ್ದರಾಮಯ್ಯ (CM Siddaramaiah) ವಿರುದ್ಧ ತನಿಖೆಗೆ ಅನುಮತಿ ನೀಡಿದ ಹಿನ್ನೆಲೆಯಲ್ಲಿ ಇಂದಿನಿಂದ ಕಾನೂನು ಸಮರ (Legal Battle) ಆರಂಭವಾಗಲಿದೆ. ರಾಜ್ಯಪಾಲರ ಆದೇಶದ ವಿರುದ್ಧ ಇಂದು ಹೈಕೋರ್ಟ್‌ನಲ್ಲಿ (High Court) ಸುಪ್ರೀಂಕೋರ್ಟ್‌ ಹಿರಿಯ ವಕೀಲರಾದ ಅಭಿಷೇಕ್ ಮನುಸಿಂಘ್ವಿ ಮತ್ತು ಕಪಿಲ್ ಸಿಬಲ್ ಟೀಂ ವಾದ ಮಾಡಲಿದೆ.

ಸಿಎಂ ಪರ ವಾದ ಏನಿರಬಹುದು?
ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ (Thawar Chand Gehlot) ನಡೆ ರಾಜಕೀಯ ಪ್ರೇರಿತವಾಗಿದೆ. ಮುಡಾ ಸೈಟ್ ಹಂಚಿಕೆಯಲ್ಲಿ ಯಾವುದೇ ಕಾನೂನು ಉಲ್ಲಂಘನೆ ನಡೆದಿಲ್ಲ..

ಅಧಿಕಾರ ದುರ್ಬಳಕೆ, ಭ್ರಷ್ಟಾಚಾರ ನಡೆದಿಲ್ಲ. ಮುಡಾ (MUDA) ನಿಯಮದ ಅನ್ವಯವೇ ನಿವೇಶನ ಹಂಚಿಕೆಯಾಗಿದೆ. ಇದರಲ್ಲಿ ನನ್ನ ಮತ್ತು ನನ್ನ ಕುಟುಂಬ ಯಾವುದೇ ನಿಯಮ ಉಲ್ಲಂಘನೆ ಮಾಡಿಲ್ಲ. ಎಂದು ಸಿಎಂ ಹೇಳಿದ್ದಾರೆ.

ರಾಜ್ಯಾಪಾಲರ ಆದೇಶದಲ್ಲಿ ಭ್ರಷ್ಟಾಚಾರ ನಿರ್ಮೂಲನ ಕಾಯ್ದೆಯ ಸೆಕ್ಷನ್ 17ಎ ಸ್ಪಷ್ಟ ಉಲ್ಲಂಘನೆಯಾಗಿದೆ. ಈ ಸೆಕ್ಷನ್ ಅಡಿ ಡಿಜಿ-ಐಜಿಪಿ ಮಟ್ಟದ ಪೊಲೀಸ್ ಅಧಿಕಾರಿ ಪ್ರಾಸಿಕ್ಯೂಷನ್‌ಗೆ ಕೇಳಬೇಕು. ಕೇಂದ್ರ ಸರ್ಕಾರವೇ 2021ರ ಸೆಪ್ಟೆಂಬರ್‌ನಲ್ಲಿ ಈ ನಿಯಮಾವಳಿ ರೂಪಿಸಿದೆ. 


ಪ್ರಾಸಿಕ್ಯೂಷನ್‌ಗೆ ಅನುಮತಿಸಲು ಯಾವುದಾದರೂ ತನಿಖಾ ವರದಿ ಇರಬೇಕು. ಸಿದ್ದರಾಮಯ್ಯ ವಿರುದ್ಧ ಯಾವುದೇ ತನಿಖಾ ವರದಿ ಇರಲಿಲ್ಲ. ಯಾವುದೇ ಸೂಕ್ತ ಆಧಾರವಿಲ್ಲದೇ ತನಿಖೆಗೆ ಒಪ್ಪಿಗೆ ನೀಡಲಾಗಿದೆ. ಖಾಸಗಿ ದೂರಿನ ಮೇಲೆ ತನಿಖೆಗೆ ನೀಡಿರುವುದು ಕಾನೂನು ಬಾಹಿರ. ಈ ಮೂಲಕ ರಾಜ್ಯಪಾಲರೇ ತನಿಖಾಧಿಕಾರಿಯಂತೆ ವರ್ತಿಸಿದ್ದಾರೆ.

ಬ್ಯುರೊ ರಿಪೋರ್ಟ್
ಫೋಕಸ್ ಕರ್ನಾಟಕ

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow