Muda Scam: ಮುಡಾ ದೂರುದಾರ ಸ್ನೇಹಮಯಿ ಕೃಷ್ಣ ವಿರುದ್ಧ ದಾಖಲಾಯ್ತು FIR!

ನವೆಂಬರ್ 13, 2024 - 19:19
 0  14
Muda Scam: ಮುಡಾ ದೂರುದಾರ ಸ್ನೇಹಮಯಿ ಕೃಷ್ಣ ವಿರುದ್ಧ ದಾಖಲಾಯ್ತು FIR!

ಬೆಂಗಳೂರು:- ಕರ್ನಾಟಕ ಸೇರಿ ಇಡೀ ದೇಶದಾದ್ಯಂತ ಭಾರೀ ಸಂಚಲನ ಸೃಷ್ಟಿಸಿದ್ದ ಮುಡಾ ಹಗರಣ ದೂರುದಾರ ಸ್ನೇಹಮಯಿ ಕೃಷ್ಣಾಗೆ ಸಂಕಷ್ಟ ಎದುರಾಗಿದೆ. ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ ನೀಡಿದ್ದ ದೂರಿನ ಆಧಾರದ ಮೇಲೆ ಇಂದು ಸ್ನೇಹಮಹಿ ಕೃಷ್ಣ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಸಿದ್ದರಾಮಯ್ಯ ಪತ್ನಿ ಬಿ.ಎಂ.ಪಾರ್ವತಿ ಮುಡಾದಿಂದ ಪಡೆದ ಸೈಟ್​ ಕ್ರಯಪತ್ರದ ಮುದ್ರಾಂಕ ಶುಲ್ಕದ ಬಗ್ಗೆ ಸ್ನೇಹಮಯಿ ಕೃಷ್ಣ ಆಕ್ಷೇಪಿಸಿದ್ದರು. ಹೀಗಾಗಿ ಸ್ನೇಹಮಯಿ ಕೃಷ್ಣ ಬ್ಲಾಕ್​ಮೇಲ್ ಮಾಡುತ್ತಿದ್ದಾರೆ. ಪ್ರತಿ ನಿತ್ಯ ಸಿಎಂ ವಿರುದ್ಧ ಒಂದಿಲ್ಲೊಂದು ಆರೋಪಮಾಡಿ ಒತ್ತಡ ಹೇರುತ್ತಿದ್ದಾರೆ. ಈ ಬಗ್ಗೆ ಕ್ರಮಕೈಗೊಳ್ಳುವಂತೆ ಎಂ.ಲಕ್ಷ್ಮಣ ದೂರು ನೀಡಿದ್ದರು. ಹೀಗಾಗಿ ಅವರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.

ಸಿಎಂ ಸಿದ್ದರಾಮಯ್ಯ ವಿರುದ್ಧ ತೇಜೋವಧೆ ಮಾಡುವುದಲ್ಲದೆ ಜನಸಾಮಾನ್ಯರಲ್ಲಿ ತಪ್ಪು ಕಲ್ಪನೆ ಮತ್ತು ತಪ್ಪಿತಸ್ಥರು ಎಂದು ಬಿಂಬಿಸುವ ಕೆಲಸವನ್ನು ಕಳೆದ 2 ತಿಂಗಳುಗಳಿಂದ ಸ್ನೇಹಮಯಿ ಕೃಷ್ಣರವರು ಮಾಡುತ್ತಿದ್ದಾರೆ. ಇದಲ್ಲದೆ ಇವರು ಮತ್ತು ಟಿಜೆ ಅಬ್ರಹಾಂ ರವರು ನ್ಯಾಯಲಯದ ಮೊರೆ ಹೋಗಿ ಮುಡಾ ವಿಚಾರಕ್ಕೆ ಲೋಕಾಯುಕ್ತ ತನಿಖೆಗೆ ವಹಿಸಬೇಕೆಂದು ಕೋರಿಕೊಂಡಿದ್ದರಿಂದ ನ್ಯಾಯಲಯ ಲೋಕಾಯುಕ್ತ ತನಿಖೆ ನಡೆಸಲು ಆದೇಶ ಮಾಡಿದೆ.

ಅದರಂತೆ ಲೋಕಾಯುಕ್ತ ತನಿಖೆ ನಡೆಸುತ್ತಿದೆ. ಆದರೆ ಸ್ನೇಹಮಯಿ ಕೃಷ್ಣರವರು ಲೋಕಾಯುಕ್ತ ತನಿಖೆ ಸರಿಯಾಗಿ ನಡೆಯುತ್ತಿಲ್ಲವೆಂದು ಮತ್ತು ತನಿಖಾಧಿಕಾರಿಯ ವಿರುದ್ಧ ಲೋಕಾಯುಕ್ತ ಎಡಿಜಿಪಿಗೆ ದೂರನ್ನು ನೀಡುವುದಲ್ಲದೆ ತನಿಖಾಧಿಕಾರಿಯವರಿಗೆ ದಿನನಿತ್ಯ ಬ್ಲಾಕ್​ಮೇಲ್ ಮತ್ತು ಒತ್ತಡ ಹೇರಲಾಗುತ್ತಿದೆ. ತನಿಖೆಯ ವರದಿಯನ್ನು ನ್ಯಾಯಲಯಕ್ಕೆ ಲೋಕಾಯುಕ್ತ ಅಧಿಕಾರಿಗಳು ಇನ್ನೂ ಸಲ್ಲಿಲ್ಲ. ತನಿಖೆ ಇನ್ನು ವಿಚಾರಣೆ ಹಂತದಲ್ಲಿರುವಾಗ ತನಿಖೆ ಸರಿಯಿಲ್ಲ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow