Muda Scam: ಸಾಕ್ಷ್ಯಾಧಾರಗಳ ಕೊರೆತೆ ಎಂದು ನೋಟಿಸ್: ಲೋಕಾಯುಕ್ತ ವಿರುದ್ಧ ಸ್ನೇಹಮಯಿ ಕೃಷ್ಣ ಗರಂ

ಮುಡಾ ನಿವೇಶನ ಹಂಚಿಕೆ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪಾತ್ರವಿಲ್ಲ ಎಂಬುದು ತನಿಖೆಯಲ್ಲಿ ಕಂಡುಬಂದಿದೆ. ಅಲ್ಲದೆ, ಆರೋಪಕ್ಕೆ ಪೂರಕವಾಗಿ ಯಾವುದೇ ಸಾಕ್ಷ್ಯಾಧಾರ ಸಿಕ್ಕಿಲ್ಲ ಎಂದು ದೂರುದಾರರಿಗೆ ಲೋಕಾಯುಕ್ತ ನೋಟಿಸ್ ನೀಡಿದೆ. ಇನ್ನೂ ಈ ವಿಚಾರವಾಗಿ ಸ್ನೇಹಮಯಿ ಕೃಷ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,
ಲೋಕಾಯುಕ್ತ ನೋಟಿಸ್ ಬಗ್ಗೆ ಪ್ರತಿಕ್ರಿಯಿಸಿ, "ಮುಡಾ 50:50 ಹಗರಣದಲ್ಲಿ ಸಾಕ್ಷ್ಯಾಧಾರಗಳ ಕೊರತೆಯಿಂದ "ಬಿ" ರಿಪೋರ್ಟ್ ಸಲ್ಲಿಸುತ್ತೇವೆ ಎಂದು ಮೈಸೂರು ಲೋಕಾಯುಕ್ತರು ನೋಟಿಸ್ ನೀಡಿದ್ದಾರೆ. ಈ ಬಗ್ಗೆ ಒಂದು ವಾರದಲ್ಲಿ ತಕರಾರು ಅರ್ಜಿ ಸಲ್ಲಿಸುತ್ತೇನೆ. ಸಾಕ್ಷ್ಯಾಧಾರಗಳನ್ನು ನೀಡಿ ಆರೋಪ ಸಾಬೀತು ಪಡಿಸುತ್ತೇನೆ" ಎಂದು ಹೇಳಿದರು.
"ಲೋಕಾಯುಕ್ತ ಅಧಿಕಾರಿಗಳ ಮೇಲೆ ಇದ್ದ ಅನುಮಾನ ಇಂದು ನಿಜವಾಗಿದೆ. ರಾಜಕೀಯ ಪ್ರಭಾವಕ್ಕೆ ಒಳಗಾಗಿ ಲೋಕಾಯುಕ್ತ ಅಧಿಕಾರಿಗಳು ಸಾಕ್ಷಿಗಳ ಕೊರತೆ ಎಂದು ನಾಲ್ಕು ಜನ ಆರೋಪಿಗಳಿಗೆ "ಬಿ" ರಿಪೋರ್ಟ್ ವರದಿ ಸಲ್ಲಿಸುತ್ತೇವೆ ಎಂದು ಲೋಕಾಯುಕ್ತ ಪೊಲೀಸರು ನನಗೆ ನೋಟಿಸ್ ನೀಡಿದ್ದಾರೆ. ಇದನ್ನು ರಾಜ್ಯದ ಜನತೆ ಪ್ರಶ್ನೆ ಮಾಡಬೇಕು.
ಒಬ್ಬ ಐಪಿಎಸ್ ಅಧಿಕಾರಿ ಒದಗಿಸಿರುವ ಸಾಕ್ಷ್ಯಾಧಾರಗಳನ್ನು ವಿಶ್ಲೇಷಣೆ ಮಾಡಿ, ಮಾಹಿತಿ ನೀಡಲು ಸಾಧ್ಯವಿಲ್ಲ ಎಂದರೆ ಇದು ನಾಚೀಕೆಗೇಡಿನ ಸಂಗತಿ. 10ನೇ ತರಗತಿ ಓದಿರುವ ನಾನು ಒಬ್ಬ ಸಾಮಾನ್ಯ ವ್ಯಕ್ತಿ. ಈ ಆರೋಪವನ್ನು ಸಾಬೀತು ಮಾಡಿ, ಸಿಎಂ ಸಿದ್ದರಾಮಯ್ಯ ಅವರಿಗೆ ಶಿಕ್ಷೆ ಕೊಡಸಲಿಲ್ಲ ಎಂದರೆ ನಾನು ಸ್ನೇಹಮಯಿ ಕೃಷ್ಣನೇ ಅಲ್ಲ" ಎಂದು ಸವಾಲು ಹಾಕಿದ್ದಾರೆ.
ನಿಮ್ಮ ಪ್ರತಿಕ್ರಿಯೆ ಏನು?






