MUDA Scam: ಸಿಎಂ ಸಿದ್ದರಾಮಯ್ಯಗೆ ಸದ್ಯಕ್ಕೆ ರಿಲೀಫ್‌: ವಿಚಾರಣೆ 27ಕ್ಕೆ ಮುಂದೂಡಿದ ಹೈಕೋರ್ಟ್‌

ಜನವರಿ 15, 2025 - 12:35
 0  10
MUDA Scam: ಸಿಎಂ ಸಿದ್ದರಾಮಯ್ಯಗೆ ಸದ್ಯಕ್ಕೆ ರಿಲೀಫ್‌: ವಿಚಾರಣೆ 27ಕ್ಕೆ ಮುಂದೂಡಿದ ಹೈಕೋರ್ಟ್‌

ಬೆಂಗಳೂರು: ಮುಡಾ ಕೇಸ್ ತನಿಖೆ ಸಿಬಿಐಗೆ ನೀಡುವಂತೆ ಕೋರಿ​ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿ ವಿಚಾರಣೆ ಇಂದು ಧಾರವಾಡ ಹೈಕೋರ್ಟ್​ನಲ್ಲಿ  ನಡೆಯಿತು. ದಾವೆಯ ವಿಚಾರಣೆಯನ್ನು ಧಾರವಾಡ ಹೈಕೋರ್ಟ್‌ ಜನವರಿ 27ಕ್ಕೆ ಮುಂದೂಡಿದೆ.

ರಾಜ್ಯ ಸರ್ಕಾರದ ಪರ ವಕೀಲ ಕಪಿಲ್ ಸಿಬಲ್ ಅವರು ದಾವೆ ವಿಚಾರಣೆಗೆ ಅಗತ್ಯ ದಾಖಲೆ ಒದಗಿಸುವುದಕ್ಕೆ ಸಮಯಾವಕಾಶ ಕೋರಿ ಜನವರಿ 27ಕ್ಕೆ ವಿಚಾರಣೆ ಮುಂದೂಡುವಂತೆ ಮನವಿ ಮಾಡಿದ್ದರು. ಇದನ್ನು ಪರಿಗಣಿಸಿದ ನ್ಯಾಯಪೀಠ, ವಿಚಾರಣೆಯನ್ನು ಜನವರಿ 27ಕ್ಕೆ ಮುಂದೂಡಿದೆ. ಈ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಅವರಿಗೆ ಸದ್ಯಕ್ಕೆ ರಿಲೀಫ್‌ ಸಿಕ್ಕಂತಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರವಾಗಿ ಹಿರಿಯ ವಕೀಲ ಪ್ರೊ.ರವಿವರ್ಮ ಕುಮಾರ್ ಮತ್ತು ಅಭಿಷೇಕ್ ಮನು ಸಿಂಘಿ, ರಾಜ್ಯ ಸರ್ಕಾರದ ಪರವಾಗಿ ಕಪಿಲ್ ಸಿಬಲ್, ಎಜಿ ಶಶಿಕಿರಣ್ ಶೆಟ್ಟಿ ಮತ್ತು ಹಿಂದಿನ ಭೂ ಮಾಲೀಕ ದೇವರಾಜು ಪರ ದುಷ್ಯಂತ್ ದವೆ ವಾದ ಮಂಡಿಸಿದರು. ಲೋಕಾಯುಕ್ತ ಪೊಲೀಸ್‌ ತನಿಖೆಯಲ್ಲಿರುವ ಪ್ರಕರಣದ ಅಂತಿಮ ವರದಿ ಸಲ್ಲಿಸಬೇಕಾದ ಗಡುವನ್ನು ಹೈಕೋರ್ಟ್‌ ಜನವರಿ 28ರ ತನಕ ವಿಸ್ತರಿಸಿದೆ.

 

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow