Muda: ಮುಡಾ ಕೇಸ್ʼಗೆ ಮತ್ತೊಂದು ಬಿಗ್ ಟ್ವಿಸ್ಟ್! ಕೇವಲ 3 ಸಾವಿರಕ್ಕೆ ಒಂದರಂತೆ 23 ಸೈಟ್ ಮಾರಾಟ

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿದೆ ಎನ್ನುವ ಆರೋಪ ಕೇಳಿ ಬಂದಾಗಿನಿಂದ ಮುಡಾ ಹಗರಣ ರಾಜ್ಯಾದ್ಯಂತ ಭಾರೀ ಸದ್ದು ಮಾಡುತ್ತಿದೆ. ಇದೀಗ ಮೈಸೂರಿನ ವಿಜಯನಗರದಲ್ಲಿ ಸುಮಾರು ಒಂದು ಕೋಟಿ ರೂಪಾಯಿಗೂ ಅಧಿಕ ಬೆಲೆಬಾಳುವ 23 ನಿವೇಶನಗಳನ್ನು ಕೇವಲ 3 ಸಾವಿರ ರೂ.ಗೆ ಮಾರಾಟ ಮಾಡಿರುವ ಆರೋಪ ಮುಡಾದ ವಿರುದ್ಧ ಕೇಳಿಬಂದಿದೆ. ಇದರಿಂದ ಸರ್ಕಾರದ ಬೊಕ್ಕಸಕ್ಕೆ 300 ಕೋಟಿ ರೂಪಾಯಿಗೂ ಅಧಿಕ ನಷ್ಟವಾಗಿದೆ ಎಂದು ಹೇಳಲಾಗುತ್ತಿದೆ.
ಮುಡಾ ಮಾಜಿ ಆಯುಕ್ತ ದಿನೇಶ್ ಮತ್ತು ರಿಯಲ್ ಎಸ್ಟೇಟ್ ಉದ್ಯಮಿ ಕಾರ್ತಿಕ ಬಡಾವಣೆಯ ಮಂಜುನಾಥ್ನಿಂದ ಮಹಾ ಭೂಗಳ್ಳತನ ನಡೆದಿದೆ ಎಂಬ ಆರೋಪ ಕೇಳಿಬಂದಿದೆ. ಜಾರಿ ನಿರ್ದೇಶನಾಲಯ (ಇಡಿ) ಮುಂದೆ ವಿಚಾರಣೆಗೆ ಹಾಜರಾಗಿದ್ದ ಮುಡಾ ಮಾಜಿ ಆಯುಕ್ತ ದಿನೇಶ್ ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ಗೆ ಪ್ರೋತ್ಸಾಹದಾಯಕ ಯೋಜನೆ ಹೆಸರಿನಲ್ಲಿ ಐದೇ ದಿನಗಳಲ್ಲಿ ಒಂದು ನಿವೇಶನಕ್ಕೆ 3 ಸಾವಿರ ರೂಪಾಯಿಯಂತೆ 23 ಸೈಟ್ಗಳನ್ನು ನೀಡಲಾಗಿದೆ.
ಇನ್ನು, ಕ್ರಯ ಪತ್ರದಲ್ಲಿ ಮಂಜುನಾಥ್ ಯಾವ ಭೂಮಿ ಕಳೆದುಕೊಂಡಿದ್ದರೆ ಎಂಬ ಮಾಹಿತಿ ಇಲ್ಲ. ಆದರೆ, ಪ್ರೋತ್ಸಾಹದಾಯಕ ಎಂದು ನಮೂದಿಸಿ ನಿವೇಶನಗಳನ್ನು ನೀಡಲಾಗಿದೆ. 5 ಲಕ್ಷ ಶುಲ್ಕ ಪಾವತಿ ಸ್ಥಳದಲ್ಲಿ ಕೇವಲ 600 ರೂಪಾಯಿ ಪಾವತಿ ಮಾಡಿಸಿಕೊಂಡು ನಿವೇಶನ ನೀಡಲಾಗಿದೆ. ಮುಡಾ ಭ್ರಷ್ಟಾಚಾರದ ಬಗ್ಗೆ ಒಂದು ವರ್ಷದ ಹಿಂದೆಯೇ ಕೃಷ್ಣ ಎಂಬವರು ಮೈಸೂರು ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಆಯುಕ್ತ ಜಿ.ಟಿ.ದಿನೇಶ್ಕುಮಾರ್, ವಿಶೇಷ ತಹಶೀಲ್ದಾರ್ ಶಿವಕುಮಾರ್, ಹೆಚ್ಚುವರಿ ಜಿಲ್ಲಾ ನೋಂದಣಾಧಿಕಾರಿ ಶ್ರೀಮತಿ.ಕಾವ್ಯ, ರಿಯಲ್ ಎಸ್ಟೇಟ್ ಉದ್ಯಮಿ ಎನ್.ಮಂಜುನಾಥ್ ವಿರುದ್ಧ ದೂರು ದಾಖಲಿಸಿದ್ದರು.
ನಿಮ್ಮ ಪ್ರತಿಕ್ರಿಯೆ ಏನು?






