Muniratna: ಶಾಸಕ ಮುನಿರತ್ನ ಮೇಲೆ ಮತ್ತೊಂದು FIR! ಯಾಕೆ ಗೊತ್ತಾ..?

ಜನವರಿ 21, 2025 - 12:06
 0  12
Muniratna: ಶಾಸಕ ಮುನಿರತ್ನ ಮೇಲೆ ಮತ್ತೊಂದು FIR! ಯಾಕೆ ಗೊತ್ತಾ..?

ಬೆಂಗಳೂರು: ದಿನಗೂಲಿ ಕೆಲಸ ಮಾಡುವವರ ಮೇಲೆ ದೌರ್ಜನ್ಯ ಮಾಡಿರುವ ಆರೋಪದ ಮೇಲೆ ಶಾಸಕ ಮುನಿರತ್ನ ಮೇಲೆ ಮತ್ತೊಂದು ಎಫ್.ಐ.ಆರ್ ದಾಖಲು ಮಾಡಲಾಗಿದೆ. ಪೀಣ್ಯ ಪ್ರಥಮ ದರ್ಜೆ ಕಾಲೇಜು ಬಳಿಯಿರುವ ಅಕ್ಕಮಹಾದೇವಿ ಸ್ಲಂ ನಲ್ಲಿ ವಾಸವಿರುವ ಸುಮಾರು 50_ಕ್ಕು ಹೆಚ್ಚು ಕುಟುಂಬಗಳ ಮನೆಗಳ ಮೇಲೆ ಶಾಸಕ ಮುನಿರತ್ನ ಮತ್ತು ಸಹಚರರು ಜೆಸಿಬಿ ತಂದು ಏಕಾಏಕಿ ಎಲ್ಲಾರ ಮನೆಯನ್ನು ನೆಲಸಮ ಮಾಡಿದ್ದಾರೆಂದು ದೂರು ದಾಖಲಾಗಿದೆ.

ವಸಂತ್ ಕುಮಾರ್, ಚನ್ನಕೇಶವ, ನವೀನ್, ರಾಮ , ಕಿಟ್ಟಿ , ಗಂಗಾ ಎಂಬುವವರು ಬಂದು ಮನೆ ನೆಲಸಮ ಮಾಡಿದ್ದಾರೆ ಎಂದು ದೂರು ನೀಡಲಾಗಿದೆ. ಪ್ರತಿ ಮನೆಯಲ್ಲಿ ಕೂಡಿಟ್ಟಿದ್ದ 20 ರಿಂದ 70 ಸಾವಿರ ಹಣ ಮತ್ತು 30ಗ್ರಾಂ ಚಿನ್ನಾಭರಣ ಮಣ್ಣು ಪಾಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಶಾಸಕ ಮುನಿರತ್ನ ತನ್ನ ಪ್ರಭಾವ ಬಳಸಿ ಕೂಲಿ ಕಾರ್ಮಿಕರ ಮೇಲೆ ದರ್ಪ ತೋರಿಸಿದ್ದಾರೆ ಎಂದು RMC ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿದೆ.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow