Murder Case: ಪತ್ನಿಯನ್ನು ಬರ್ಬರವಾಗಿ ಕೊಲೆಗೈದು ಪೊಲೀಸರಿಗೆ ಶರಣಾದ ಪಾಪಿ ಗಂಡ..!

ಬೆಂಗಳೂರು: ಗಂಡನೋರ್ವ ತನ್ನ ಪತ್ನಿಯನ್ನು ಕೊಲೆಗೈದು ಪೊಲೀಸರಿಗೆ ಶರಣಾಗಿರುವ ಘಟನೆ ಬಾಣಸವಾಡಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕಲೈವಾಣಿ ಹತ್ಯೆಯಾದ ಮಹಿಳೆಯಾಗಿದ್ದು, ರಮೇಶ್ ಹೆಂಡತಿ ಕೊಂದ ಪಾಪಿ ಗಂಡನಾಗಿದ್ದಾನೆ.
ಇಬ್ಬರೂ ಕೂಡ ಕಳೆದ ಕೆಲ ವರ್ಷದ ಹಿಂದೆ ಎರಡನೇ ವಿವಾಹವಾಗಿದ್ದರು. ಆರೋಪಿ ರಮೇಶ್ ಮರಗೆಲಸ ಮಾಡಿಕೊಂಡಿದ್ದ. ಆರೋಪಿ ರಮೇಶ್ ಗೆ ಅದಾಗಲೇ ಇಬ್ಬರು ಮಕ್ಕಳಿದ್ದರು. ಮಕ್ಕಳ ವಿಷಯವಾಗಿ ಕಳೆದ ಒಂದು ವರ್ಷದಿಂದ ಇಬ್ಬರ ನಡುವೆ ಗಲಾಟೆಯಿತ್ತು.
ಗಲಾಟೆ ಜೋರಾಗಿ ಪತ್ನಿಯನ್ನ ರಮೇಶ್ ಮರಗೆಲಸದ ಉಳಿಯಿಂದ ಹೊಡೆದು ಹತ್ಯೆ ಮಾಡಿದ್ದಾನೆ. ಬಳಿಕ ಪೊಲೀಸ್ ಠಾಣೆಗೆ ಶರಣಾಗಿದ್ದಾನೆ. ಘಟನೆ ಸಂಬಂಧ ಬಾಣಸವಾಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಿಮ್ಮ ಪ್ರತಿಕ್ರಿಯೆ ಏನು?






