Narendra Modi: ಆಟದ ಮೈದಾನದಲ್ಲೂ ಆಪರೇಷನ್​ ಸಿಂಧೂರ್! ಪ್ರಧಾನಿ ಮೋದಿ ಅಭಿನಂದನೆ

ಸೆಪ್ಟೆಂಬರ್ 29, 2025 - 10:52
 0  9
Narendra Modi: ಆಟದ ಮೈದಾನದಲ್ಲೂ ಆಪರೇಷನ್​ ಸಿಂಧೂರ್! ಪ್ರಧಾನಿ ಮೋದಿ ಅಭಿನಂದನೆ

ಏಷ್ಯಾಕಪ್ ಕ್ರಿಕೆಟ್ ಫೈನಲ್‌ನಲ್ಲಿ ಭಾರತ ಪಾಕಿಸ್ತಾನವನ್ನು ಮಣಿಸಿ 17ನೇ ಆವೃತ್ತಿಯ ಚಾಂಪಿಯನ್‌ ಪಟ್ಟವನ್ನು ಕಿರೀಟಿಸಿದೆ. ನಿನ್ನೆ ರಾತ್ರಿ ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಅಂತಿಮ ಪಂದ್ಯದಲ್ಲಿ ಟೀಂ ಇಂಡಿಯಾ 5 ವಿಕೆಟ್‌ಗಳ ಭರ್ಜರಿ ಜಯ ದಾಖಲಿಸಿತು. ಈ ಗೆಲುವಿನಿಂದ ಭಾರತ ತನ್ನ ಒಂಬತ್ತನೇ ಏಷ್ಯಾಕಪ್ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ.

ಭಾರತ ತಂಡದ ಪಾಕಿಸ್ತಾವನ್ನ ಬಗ್ಗುಬಡಿಯುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿ ಅವರು ಎಕ್ಸ್ (ಟ್ವಿಟರ್)ನಲ್ಲಿ ಟ್ವೀಟ್ ಮಾಡಿ ಭಾರತ ತಂಡವನ್ನ ವಿಶೇಷ ರೀತಿಯಲ್ಲಿ ಅಭಿನಂದಿಸಿದ್ದಾರೆ. ಈ ಗೆಲುವನ್ನು "ಆಟದ ಕ್ಷೇತ್ರದಲ್ಲಿ ಆಪರೇಷನ್ ಸಿಂದೂರ್" ಎಂದು ಕರೆದಿದ್ದಾರೆ. ಗೇಮ್​ ಫೀಲ್ಡ್​​ನಲ್ಲೂ ಆಫರೇಷನ್​ ಸಿಂಧೂರ್, " ಫಲಿತಾಂಶ ಎರಡರಲ್ಲೂ ಒಂದೇ – ಭಾರತಕ್ಕೆ ಗೆಲುವು" ಎಂದು ಮೋದಿ ಭಾರತ ತಂಡಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ.

ಪಹಲ್ಗಾಮ್ ಭಯೋತ್ಪಾದಕ ದಾಳಿಯ ವಿರುದ್ಧವಾಗಿ ಭಾರತ ಸೇನೆ ಪಾಕಿಸ್ತಾನದಲ್ಲಿದ್ದ ಉಗ್ರರ ಹಡಗುತಾಣಗಳ ಮೇಲೆ ದಾಳಿಗೆ ಉಗ್ರನೆಲೆಗಳನ್ನ ಧ್ವಂಸ ಮಾಡಿತ್ತು. ಇದಕ್ಕೆ ಭಾರತ ಸರ್ಕಾರ ಆಫರೇಷನ್ ಸಿಂಧೂರ ಎಂದು ಹೆಸರಿಟ್ಟಿತ್ತು. ಈ ದಾಳಿಯ ವೇಳೆ ಪಾಕಿಸ್ತಾನದ 9 ಭಯೋತ್ಪಾದಕ ನೆಲೆಗಳನ್ನ ಭಾರತ ವಾಯು ಸೇನ್ ಧ್ವಂಸಗೊಳಿಸಿತ್ತು.

ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿರುವ ಜೈಶ್-ಎ-ಮೊಹಮ್ಮದ್ (JeM) ಮತ್ತು ಲಷ್ಕರ್-ಎ-ತೈಬಾ (LeT) ನಂತಹ ಉಗ್ರ ಸಂಘಟನೆಗಳ 9 ತರಬೇತಿ ಶಿಬಿರಗಳನ್ನು ನಾಶಪಡಿಸಲಾಗಿತ್ತು. ಇದಕ್ಕೆ ಪ್ರತಿಯಾಗಿ ಪಾಕಿಸ್ತಾನ ಕೂಡ ಭಾರತದ ಮೇಲೆ ದಾಳಿ ನಡೆಸಿತ್ತು. ಇದಕ್ಖೂ ಪ್ರತಿಕ್ರಿಯೆ ನೀಡಿದ್ದ ಭಾರತೀಯ ಸೇನೆ ಹಲವು ಪಾಕಿಸ್ತಾನದ ವಾಯುನೆಲೆಗಳನ್ನ ಧ್ವಂಸ ಮಾಡಿತ್ತು.

 

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow