Operation Sindoor: ಇದು ಟ್ರೇಲರ್ ಅಷ್ಟೇ, ಸಮಯ ಬಂದಾಗ ಫುಲ್ ಸಿನಿಮಾ ತೋರಿಸುತ್ತೇವೆ - ರಾಜನಾಥ್ ಸಿಂಗ್

ಶ್ರೀನಗರ: ಇದು ಟ್ರೇಲರ್ ಅಷ್ಟೇ, ಸಮಯ ಬಂದಾಗ ಫುಲ್ ಸಿನಿಮಾ ತೋರಿಸುತ್ತೇವೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಪಾಕಿಸ್ತಾನಕ್ಕೆ ಖಡಕ್ ಎಚ್ಚರಿಕೆ ನೀಡಿದ್ದಾರೆ. ಗುಜರಾತ್ನ ಭುಜ್ ವಾಯು ನೆಲೆಗೆ ಭೇಟಿ ನೀಡಿ, "ವಾಯುಪಡೆಯ ವೀರ ಯೋಧರ" ಜೊತೆ ಸಂವಾದ ನಡೆಸಿದರು. ಈ ವೇಳೆ ಮಾತನಾಡಿದ ರಕ್ಷಣಾ ಸಚಿವರು, ನಾವು ಪಾಕಿಸ್ತಾನಕ್ಕೆ ಸಮಯ ನೀಡಿದ್ದೇವೆ. ಅವರ ನಡವಳಿಕೆ ಸುಧಾರಿಸಿದರೆ ಸರಿ, ಇಲ್ಲದಿದ್ದರೆ,
ಅದಕ್ಕೆ ಕಠಿಣ ಶಿಕ್ಷೆ ವಿಧಿಸಲಾಗುತ್ತದೆ. ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ. ಸದ್ಯ ಏನೇ ನಡೆದರೂ ಅದು ಕೇವಲ ಟ್ರೇಲರ್ ಮಾತ್ರ. ಸರಿಯಾದ ಸಮಯ ಬಂದಾಗ, ನಾವು ಪೂರ್ತಿ ಸಿನಿಮಾವನ್ನು ಜಗತ್ತಿಗೆ ತೋರಿಸುತ್ತೇವೆ ಎಂದು ರಕ್ಷಣಾ ಸಚಿವರು ಎಚ್ಚರಿಕೆ ನೀಡಿದ್ದಾರೆ.
1965 ಮತ್ತು 1971ರಲ್ಲಿ ಪಾಕ್ ವಿರುದ್ಧದ ನಮ್ಮ ಗೆಲುವಿಗೆ ಭುಜ್ ಸಾಕ್ಷಿಯಾಗಿತ್ತು. ಈಗ ಮತ್ತೆ ಪಾಕ್ ವಿರುದ್ಧದ ಜಯಕ್ಕೆ ಸಾಕ್ಷಿಯಾಗಿದೆ. ಆದ್ದರಿಂದ ಇಲ್ಲಿ ಬರಲು ನನಗೆ ಹೆಮ್ಮೆ ಎನಿಸುತ್ತಿದೆ ಎಂದು ರಾಜ್ನಾಥ್ ಸಿಂಗ್ ತಿಳಿಸಿದರು.
ನಿಮ್ಮ ಪ್ರತಿಕ್ರಿಯೆ ಏನು?






