Pahalgam Attack: ಉಗ್ರರ ದಾಳಿಗೆ ಬೆಂಗಳೂರಿನ ಭರತ್ ಭೂಷಣ್ ಸಾವು..!

ಬೆಂಗಳೂರು: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದ ದಾಳಿ ದೇಶವನ್ನೇ ಬೆಚ್ಚಿ ಬೀಳಿಸಿದ್ದು, ಕರ್ನಾಟಕದ ಅನೇಕ ಪ್ರವಾಸಿಗರ ಸ್ಥಿತಿ ಅತಂತ್ರವಾಗಿದೆ. ಭಯೋತ್ಪಾದಕ ದಾಳಿಯಲ್ಲಿ ಬೆಂಗಳೂರು ನಿವಾಸಿ ಭರತ್ ಭೂಷಣ್ ದಾರುಣವಾಗಿ ಹತ್ಯೆಗೀಡಾಗಿದ್ದಾರೆ.
ಹಾವೇರಿ ಜಿಲ್ಲೆಯ ರಾಣೇಬೆನ್ನೂರು ಮೂಲದ ಭರತ್ ಭೂಷಣ್ ಬೆಂಗಳೂರಿನ ಮತ್ತಿಕೆರೆ ಜೆ.ಪಿ.ಪಾರ್ಕ್ ಬಳಿ ಕುಟುಂಬದೊಂದಿಗೆ ವಾಸಿಸುತ್ತಿದ್ದರು. ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಅವರು, ಕೆಲವು ದಿನಗಳ ಹಿಂದೆ ಪತ್ನಿ ಸುಜಾತಾ ಮತ್ತು ಮೂರು ವರ್ಷದ ಮಗುವಿನೊಂದಿಗೆ ಕಾಶ್ಮೀರ ಪ್ರವಾಸಕ್ಕೆ ತೆರಳಿದ್ದರು.
ಘಟನೆಯ ವಿವರವನ್ನು ಭರತ್ ಭೂಷಣ್ ಅವರ ಪತ್ನಿ ಸುಜಾತಾ ಕುಟುಂಬಕ್ಕೆ ತಿಳಿಸಿದ್ದಾರೆ. ಪ್ರವಾಸದ ವೇಳೆ, ಬಂದೂಕು ಧಾರಿಯೊಬ್ಬ ಭರತ್ ಭೂಷಣ್ ಬಳಿ ಬಂದು ಅವರ ಹೆಸರು ಮತ್ತು ಧರ್ಮದ ಬಗ್ಗೆ ಕೇಳಿದ್ದಾನೆ. ಭರತ್ ತಾನು ಹಿಂದೂ ಎಂದು ಉತ್ತರಿಸಿದ ತಕ್ಷಣ, ಆ ವ್ಯಕ್ತಿ ತಲೆಗೆ ಗುಂಡು ಹಾರಿಸಿ ಪರಾರಿಯಾಗಿದ್ದಾನೆ.
ನಿಮ್ಮ ಪ್ರತಿಕ್ರಿಯೆ ಏನು?






