PM Kisan: ಪಿಎಂ ಕಿಸಾನ್ ಸಮ್ಮಾನ್ ನಿಧಿ 20ನೇ ಕಂತು ಬಿಡುಗಡೆ ಯಾವಾಗ? ಇಲ್ಲಿದೆ ಫುಲ್ ಡಿಟೇಲ್ಸ್

ಪಿಎಂ ಕಿಸಾನ್ ಸಮ್ಮಾನ್ ನಿಧಿಯ 20ನೇ ಕಂತಿನ ಹಣವನ್ನು ಬಿಡುಗಡೆ ಮಾಡಲು ಕೇಂದ್ರ ಸರ್ಕಾರ ನಿರ್ಧಾರ ಮಾಡಿದೆ. ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಇಲ್ಲಿಯವರೆಗೆ 19 ಕಂತುಗಳನ್ನು ಬಿಡುಗಡೆ ಮಾಡಲಾಗಿದೆ. ಫೆಬ್ರವರಿ 24, 2025 ರಂದು ಬಿಹಾರದ ಭಾಗಲ್ಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ 9.80 ಕೋಟಿ ರೈತರ ಖಾತೆಗಳಿಗೆ 22000 ಕೋಟಿ ರೂಪಾಯಿ ವರ್ಗಾಯಿಸಿದ್ದರು.
ಇದರ ನಂತರ ಈಗ ರೈತರು 20ನೇ ಕಂತಿಗಾಗಿ ಕಾಯುತ್ತಿದ್ದಾರೆ. 20ನೇ ಕಂತಿನ ಹಣ ಜೂನ್ 2025ರಲ್ಲಿ ಬಿಡುಗಡೆಯಾಗಬಹುದು. ಆದರೆ, ಇದರ ಬಗ್ಗೆ ಇನ್ನೂ ಯಾವುದೇ ನಿಖರವಾದ ದಿನಾಂಕ ನಿಗದಿಯಾಗಿಲ್ಲ. ಪಿಎಂ-ಕಿಸಾನ್ ಯೋಜನೆಯಡಿ ಸರ್ಕಾರ ಇಲ್ಲಿಯವರೆಗೆ ಒಟ್ಟು 3.68 ಲಕ್ಷ ಕೋಟಿ ರೂಪಾಯಿಗಳನ್ನು ರೈತರ ಖಾತೆಗಳಿಗೆ ವರ್ಗಾಯಿಸಿದೆ.
ಕೇಂದ್ರ ಸರ್ಕಾರ ರೈತರಿಗಾಗಿ ಅನೇಕ ಯೋಜನೆಗಳನ್ನು ನಡೆಸುತ್ತಿದೆ. ಅದರಲ್ಲಿ ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಮುಖ್ಯವಾದದ್ದು. ಈ ಯೋಜನೆಯಡಿ ಸರ್ಕಾರ ಪ್ರತಿ ವರ್ಷ ರೈತರಿಗೆ 2000 ರೂಪಾಯಿಗಳನ್ನು ಮೂರು ಕಂತುಗಳ ಮೂಲಕ 6000 ರೂಪಾಯಿ ಆರ್ಥಿಕ ಸಹಾಯ ನೀಡುತ್ತದೆ. ಈ ಯೋಜನೆ ಬಗ್ಗೆ ಒಂದು ದೊಡ್ಡ ಅಪ್ಡೇಟ್ ಬಂದಿದೆ. ಅದರ ಪ್ರಕಾರ ದೆಹಲಿಯ ರೈತರಿಗೆ ಈಗ ಹೆಚ್ಚು ಹಣ ಸಿಗಲಿದೆ.
ನಿಮ್ಮ ಪ್ರತಿಕ್ರಿಯೆ ಏನು?






