Prakash Raj: ಕುಂಭಮೇಳದಲ್ಲಿ ಪ್ರಕಾಶ್ ರೈ ಫೋಟೋ: ಪ್ರಶಾಂತ್ ಸಂಬರಗಿ ವಿರುದ್ಧ ದೂರು

ಮೈಸೂರು: ಕಳೆದೆರಡು ದಿನಗಳಿಂದ ಪ್ರಕಾಶ್ ರಾಜ್ ಅವರ, ಎಐ ಫೋಟೋ ಜಾಲತಾಣದಲ್ಲಿ ಹರಿದಾಡುತ್ತಿದೆ. ಇದನ್ನು ಸಾಮಾಜಿಕ ಕಾರ್ಯಕರ್ತ ಹಾಗೂ ನಟ ಪ್ರಶಾಂತ್ ಸಂಬರಗಿ ಅವರೂ ಶೇರ್ ಮಾಡಿದ್ದರು. ಕುಂಭಮೇಳದಲ್ಲಿ ಪ್ರಕಾಶ್ ರಾಜ್ ಮಿಂದೆದ್ದರು. ಅವರ ಎಲ್ಲಾ ಪಾಪಗಳು ತೊಳೆದು ಹೋಗುತ್ತವೆ ಎನ್ನುವ ನಂಬಿಕೆ ಇದೆ ಎನ್ನುವ ಕ್ಯಾಪ್ಷನ್ ನೀಡಿದ್ದರು.
ಇದೀಗ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರ್ಗಿ ವಿರುದ್ಧ ಮೈಸೂರಿನಲ್ಲಿ ಎಫ್ಐಆರ್ ದಾಖಲಾಗಿದೆ.
ಮೈಸೂರಿನ ಲಕ್ಷ್ಮೀಪುರಂ ಪೊಲೀಸ್ ಠಾಣೆಯಲ್ಲಿ ಪ್ರಕಾಶ್ ರಾಜ್ ನೀಡಿದ ದೂರಿನ ಅಡಿ ಎಫ್ಐಆರ್ ದಾಖಲಾಗಿದೆ. ಈ ಬಗ್ಗೆ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕುಂಭಮೇಳದ ಪುಣ್ಯ ಸ್ನಾನ ದೇಶದಲ್ಲಿ ನಡೆಯುತ್ತಿದೆ. ಹಿಂದೂ ಧರ್ಮದವರಿಗೆ ಹಾಗೂ ದೇವರನ್ನ ನಂಬುವವರಿಗೆ ಅದು ಪುಣ್ಯವಾದ ಸ್ಥಳ. ಈಗ ಎಐ ಆ್ಯಪ್ ಬಳಿಸಿ ಪ್ರಕಾಶ್ ರೈ ಕುಂಭಮೇಳದಲ್ಲಿ ಸ್ನಾನ ಮಾಡಿದ್ರಾ? ಎಂದು ಫೋಟೊ ವೈರಲ್ ಮಾಡುತ್ತಿದ್ದಾರೆ. ಅಂತಹ ಪುಣ್ಯದ ಸ್ನಾನ ನಡೆಯಬೇಕದಾರೆ ಅದರಲ್ಲಿ ರಾಜಕಾರಣ ನಡೆಯುತ್ತಿದೆ ಎಂದು ಕಿಡಿಕಾರಿದ್ದಾರೆ.
ಮೊದಲಿನಿಂದಲೂ ಪ್ರಕಾಶ್ ರೈ ಹಿಂದು ವಿರೋಧಿ ಎಂದು ಸುಳ್ಳು ಸುದ್ದಿ ಹಬ್ಬಿಸಿಕೊಂಡು ಬಂದಿದ್ದಾರೆ. ಪ್ರಶಾಂತ್ ಸಂಬರ್ಗಿ ಪ್ರಖ್ಯಾತರೋ? ಕುಖ್ಯಾತರೊ? ನನಗೆ ಗೊತ್ತಿಲ್ಲ. ದೇಶದಲ್ಲಿ ಸುಳ್ಳು ಸುದ್ದಿಗಳನ್ನ ಹಬ್ಬಿಸುವುದು ಅಭ್ಯಾಸವಾಗಿ ಬಿಟ್ಟಿದೆ. ಇದನ್ನ ಯಾರು ಪ್ರಶ್ನೆ ಮಾಡುತ್ತಿಲ್ಲ. ಧ್ವೇಷವನ್ನು ಹರಡುತ್ತಿದ್ದಾರೆ. ಇವರು ನಿಜವಾದ ಧರ್ಮದವರಲ್ಲ. ಜನರ ನಂಬಿಕೆಗೆ ಅಘಾತ ಮಾಡುತ್ತಿದ್ದಾರೆ. ನನ್ನ ವಿರುದ್ಧ ಸಾಕಷ್ಟು ವಿಚಾರದಲ್ಲಿ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ ಎಂದು ಅಸಮಾಧಾನ ಹೊರಹಾಕಿದ್ದಾರೆ.
ನಿಮ್ಮ ಪ್ರತಿಕ್ರಿಯೆ ಏನು?






