Rain in Karnataka: ಕರ್ನಾಟಕದಲ್ಲಿ ಮುಂಗಾರು ಮಳೆ ಆರ್ಭಟ: ಇಂದು 3 ಜಿಲ್ಲೆಗೆ ರೆಡ್ ಅಲರ್ಟ್ ಘೋಷಣೆ.!

ಆಗಸ್ಟ್ 19, 2025 - 11:20
 0  26
Rain in Karnataka: ಕರ್ನಾಟಕದಲ್ಲಿ ಮುಂಗಾರು ಮಳೆ ಆರ್ಭಟ: ಇಂದು 3 ಜಿಲ್ಲೆಗೆ ರೆಡ್ ಅಲರ್ಟ್ ಘೋಷಣೆ.!
Rain in Karnataka: ಕರ್ನಾಟಕದಲ್ಲಿ ಮುಂಗಾರು ಮಳೆ ಆರ್ಭಟ: ಇಂದು 3 ಜಿಲ್ಲೆಗೆ ರೆಡ್ ಅಲರ್ಟ್ ಘೋಷಣೆ.!

ಬೆಂಗಳೂರು: ರಾಜ್ಯದಲ್ಲಿ ಮಳೆ ಭಾರೀ ಪ್ರಮಾಣದಲ್ಲಿ ಮುಂದುವರಿಯುತ್ತಿರುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಇಂದು ಮೂರು ಜಿಲ್ಲೆಗಳಿಗೆ ರೆಡ್ ಅಲರ್ಟ್, ಆರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಹಾಗೂ ಉಳಿದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ.

ರೆಡ್ ಅಲರ್ಟ್ 

  • ಬೆಳಗಾವಿ
  • ಉತ್ತರ ಕನ್ನಡ
  • ಉಡುಪಿ

ರೆಡ್ ಅಲರ್ಟ್ ಘೋಷಣೆಯಾದ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳಲ್ಲಿ 204.5 ಮಿಮೀ ಮೀರಿದ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಜೀವ ಮತ್ತು ಆಸ್ತಿಗೆ ಅಪಾಯ ಉಂಟಾಗುವ ಭೀತಿ ಇರುವುದರಿಂದ ಸಾರ್ವಜನಿಕರು ಅಧಿಕಾರಿಗಳ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕಾಗಿದೆ.

ಆರೆಂಜ್ ಅಲರ್ಟ್

  • ದಕ್ಷಿಣ ಕನ್ನಡ
  • ಚಿಕ್ಕಮಗಳೂರು
  • ಧಾರವಾಡ
  • ಗದಗ
  • ಹಾವೇರಿ
  • ಶಿವಮೊಗ್ಗ

ಯೆಲ್ಲೋ ಅಲರ್ಟ್

  • ಬೆಂಗಳೂರು ನಗರ
  • ಬೆಂಗಳೂರು ಗ್ರಾಮಾಂತರ
  • ಮೈಸೂರು
  • ಮಂಡ್ಯ
  • ರಾಮನಗರ
  • ತುಮಕೂರು
  • ಹಾಗೂ ಇತರೆ ಉಳಿದ ಎಲ್ಲಾ ಜಿಲ್ಲೆಗಳು

ಅಲ್ಲದೆ, ಸಮುದ್ರ ತೀರ ಪ್ರದೇಶಗಳಲ್ಲಿ ಗಾಳಿಯ ವೇಗ ಗಂಟೆಗೆ 40-50 ಕಿ.ಮೀ ಬೀಸುವ ಸಾಧ್ಯತೆ ಇರುವುದರಿಂದ ಮೀನುಗಾರರು ಸಮುದ್ರಕ್ಕೆ ಹೋಗದಂತೆ ಎಚ್ಚರಿಕೆ ನೀಡಲಾಗಿದೆ.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow