Rajat Kishan: ಬಿಗ್ ಬಾಸ್ ಮಾಜಿ ಸ್ಪರ್ಧಿ ರಜತ್ ಮತ್ತೆ ಅರೆಸ್ಟ್..! ಅಸಲಿ ಕಾರಣ ಇಲ್ಲಿದೆ ನೋಡಿ

ಬಿಗ್ಬಾಸ್ ಕನ್ನಡದ ಮಾಜಿ ಸ್ಪರ್ಧಿಗಳಾದ ರಜತ್ ಕಿಶನ್ ಮತ್ತು ವಿನಯ್ ಗೌಡ ಅವರ ‘ಮಚ್ಚು’ ರೀಲ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಸವೇಶ್ವರ ನಗರ ಪೊಲೀಸರಿಂದ ರಜತ್ ರನ್ನು ಮತ್ತೆ ಅರೆಸ್ಟ್ ಮಾಡಿದ್ದಾರೆ. ಕೇಸ್ನಲ್ಲಿ ಈಗಾಗಲೇ ಒಮ್ಮೆ ಅರೆಸ್ಟ್ ಆಗಿ ಜಾಮೀನು ಪಡೆದಿದ್ದರು ರಜತ್. ನ್ಯಾಯಾಲಯ ಷರತ್ತುಬದ್ದ ಜಾಮೀನು ನೀಡಿತ್ತು. ಜಾಮೀನು ಪಡೆದ ಬಳಿಕ ನ್ಯಾಯಾಲಯಕ್ಕೆ ರಜತ್ ಹಾಜಾರಾಗಿರಲಿಲ್ಲ. ಹೀಗಾಗಿ ಆರೋಪಿ ವಿರುದ್ದ ಜಾಮೀನು ರಹಿತ ವಾರೆಂಟ್ ಜಾರಿ ಆಗಿತ್ತು.
ಹೀಗಾಗಿ ರಜತ್ ಅವರನ್ನು ಪೊಲೀಸರು ಬಂಧನ ಮಾಡಿದ್ದಾರೆ ಎನ್ನಲಾಗಿದೆ. ರಜತ್ ಅವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಲಿದ್ದಾರೆ ಪೊಲೀಸರು. ಇಬ್ಬರ ವಿರುದ್ದವೂ ಜಾಮೀನು ರಹಿತ ವಾರೆಂಟ್ ಜಾರಿ ಆಗಿತ್ತು. ಜಾಮೀನು ನೀಡುವಾಗ ಪ್ರತಿ ವಿಚಾರಣೆಗೂ ನ್ಯಾಯಾಲಯಕ್ಕೆ ಹಾಜರಾಗಲು ಸೂಚಿಸಿತ್ತು ಆದರೆ ನ್ಯಾಯಾಲಯಕ್ಕೆ ರಜತ್ ಹಾಗೂ ವಿನಯ್ ಇಬ್ಬರೂ ಹಾಜರಾಗಿರಲಿಲ್ಲ.
ರೀಲ್ಸ್ ನೋಡಿದ ಬಳಿಕ ಪೊಲೀಸರು ರಜತ್ ಹಾಗೂ ವಿನಯ್ ಗೌಡರನ್ನು ಕರೆಸಿ ವಿಚಾರಣೆ ನಡೆಸಿದ್ದರು. ಬಳಿಕ ಸ್ಪಷ್ಟನೆ ನೀಡಿದ್ದ ರಜತ್ ನಾವು ರೀಲ್ಸ್ಗೆ ಬಳಸಿದ ಮಚ್ಚು ಮಿಸ್ ಆಗಿದೆ. ಪೊಲೀಸರ ದಾರಿ ತಪ್ಪಿಸುವ, ಸುಳ್ಳು ಹೇಳುವ ಕೆಲಸವನ್ನು ನಾವು ಮಾಡಿಲ್ಲ ಎಂದು ಹೇಳಿದ್ದರು.
ನಿಮ್ಮ ಪ್ರತಿಕ್ರಿಯೆ ಏನು?






