Ranya Rao: ಚಿನ್ನ ಸಾಗಾಣಿಕೆ ಪ್ರಕರಣ: ಇಂದು ರನ್ಯಾ ಜಾಮೀನು ಭವಿಷ್ಯ ನಿರ್ಧಾರ.!

ಬೆಂಗಳೂರು: ಅಕ್ರಮ ಚಿನ್ನ ಸಾಗಾಣಿಕೆ ಕೇಸ್ನಲ್ಲಿ ನ್ಯಾಯಾಂಗ ಬಂಧನಕ್ಕೆ ಒಳಗಾಗಿರುವ ನಟಿ ರನ್ಯಾ ರಾವ್ ಅವರು ಜಾಮೀನು ಪಡೆಯಲು ಪ್ರಯತ್ನಿಸುತ್ತಿದ್ದಾರೆ. ಅವರ ಜಾಮೀನು ಅರ್ಜಿ ವಿಚಾರಣೆ ಮುಕ್ತಾಯ ಆಗಿದ್ದು, ಬೆಂಗಳೂರಿನ 64ನೇ ಸಿಸಿಹೆಚ್ ಕೋರ್ಟ್ನಲ್ಲಿ ವಿಚಾರಣೆ ನಡೆದಿದ್ದು, ಇಂದು ಆದೇಶ ಪ್ರಕಟ ಆಗಲಿದೆ.
14 ಕೆ.ಜಿ ಅಂದ್ರೆ 12 ಕೋಟಿ ಮೌಲ್ಯದ ಚಿನ್ನದ ಗಟ್ಟಿಗಳನ್ನು ದುಬೈನಿಂದ ಬೆಂಗಳೂರಿಗೆ ತಂದು ಬಂಧನಕ್ಕೆ ಒಳಗಾಗಿದ್ದ ರನ್ಯಾ ರಾವ್ಗೆ ಮ್ಯಾಜಿಸ್ಟ್ರೇಟ್ ಕೋರ್ಟ್ ಶಾಕ್ ನೀಡಿತ್ತು.
ಮತ್ತೆ ಜಾಮೀನು ಕೋರಿ ಸೆಷನ್ಸ್ ಕೋರ್ಟ್ ಅಲ್ಲಿ ಅರ್ಜಿ ಸಲ್ಲಿಸಲಾಗಿತ್ತು. ವಿಚಾರಣೆ ವೇಳೆ ಚಿನ್ನ ಕಳ್ಳ ಸಾಗಾಣೆ ಮಾಡೋದಕ್ಕೆ ಹವಾಲ ವಹಿವಾಟು ನಡೆಸಲಾಗುತ್ತಿತ್ತು ಎಂಬ ಗಂಭೀರ ಆರೋಪವನ್ನು ಡಿಆರ್ಐ ಮಾಡಿತ್ತು. ಸುದೀರ್ಘ ವಾದ – ಪ್ರತಿವಾದ ಆಲಿಸಿದ ನ್ಯಾಯಾಲಯ ಆದೇಶ ಕಾಯ್ದಿರಿಸಿತ್ತು. ಇಂದು ಆದೇಶ ಹೊರಬೀಳಲಿದೆ.
ನಿಮ್ಮ ಪ್ರತಿಕ್ರಿಯೆ ಏನು?






