Ravindra Jadeja: ರಣಜಿ ಟ್ರೋಫಿಯಲ್ಲಿ ಲಯಕ್ಕೆ ಸ್ಪಿನ್ನರ್ ರವೀಂದ್ರ ಜಡೇಜಾ!

ಫಾರ್ಮ್ ಕಳೆದುಕೊಂಡಿದ್ದ ಸ್ಪಿನ್ನರ್ ರವೀಂದ್ರ ಜಡೇಜಾ ಅವರು ರಣಜಿ ಟ್ರೋಫಿಯಲ್ಲಿ ಮತ್ತೆ ಲಯ ಕಂಡುಕೊಂಡಿದ್ದಾರೆ.
ಟೀಮ್ ಇಂಡಿಯಾದ ಸ್ಟಾರ್ ಆಟಗಾರರು ಚಾಂಪಿಯನ್ಸ್ ಟ್ರೋಫಿಗೆ ಸಿದ್ಧತೆ ನಡೆಸುತ್ತಿದ್ದಾರೆ. ಈ ಬೆನ್ನಲ್ಲೆ ಫಾರ್ಮ್ ಇಲ್ಲದ ಆಟಗಾರರು ಲಯ ಕಂಡು ಕೊಳ್ಳಲು ದೇಶೀಯ ಟೂರ್ನಿಗಳಲ್ಲಿ ಆಡುತ್ತಿದ್ದಾರೆ. ಈ ವೇಳೆ ಟೀಮ್ ಇಂಡಿಯಾದ ಸ್ಟಾರ್ ಬ್ಯಾಟರ್ಸ್ ರನ್ ಬರವನ್ನು ಮುಂದುವರೆಸಿದರೆ, ಟೀಮ್ ಇಂಡಿಯಾದ ಸ್ಟಾರ್ ಆಲ್ರೌಂಡರ ಅಮೋಘ ಪ್ರದರ್ಶನ ನೀಡಿದ್ದಾರೆ.
ರಣಜಿ ಟ್ರೋಫಿ ಪಂದ್ಯಗಳಲ್ಲಿ ರವೀಂದ್ರ ಜಡೇಜಾ ಅದ್ಭುತ ಸಾಧನೆ ಮಾಡಿದ್ದಾರೆ. ಸೌರಾಷ್ಟ್ರ ಪರ ಆಡುತ್ತಿರುವ ರವೀಂದ್ರ ಜಡೇಜಾ ಡೆಲ್ಲಿ ವಿರುದ್ಧದ ಮೊದಲ ಇನ್ನಿಂಗ್ಸ್ನಲ್ಲಿ ಐದು ವಿಕೆಟ್ ಪಡೆದ ಸಾಧನೆ ಮಾಡಿದರು. ಜಡೇಜಾ ಡೆಲ್ಲಿ ವಿರುದ್ಧ 17.4 ಓವರ್ ಬೌಲ್ ಮಾಡಿ ಕೇವಲ 66 ರನ್ ನೀಡಿ ಐದು ವಿಕೆಟ್ ಪಡೆದರು.
ಜಡೇಜಾ ಡೆಲ್ಲಿ ಮೇಲೆ ಎಂತಹ ಒತ್ತಡವನ್ನು ಸೃಷ್ಟಿಸಿದರು ಎಂದರೆ ತಂಡವು ಮೊದಲ ಇನ್ನಿಂಗ್ಸ್ನಲ್ಲಿ ಕೇವಲ 188 ರನ್ ಗಳಿಸಲಷ್ಟೇ ಶಕ್ತವಾಯಿತು. ರಿಷಬ್ ಪಂತ್ ಕೂಡ ಡೆಲ್ಲಿ ತಂಡದಲ್ಲಿ ಆಡುತ್ತಿದ್ದರು ಆದರೆ ಅವರ ಉಪಸ್ಥಿತಿಯು ಈ ತಂಡಕ್ಕೆ ಹೆಚ್ಚು ನೆರವಾಗಲಿಲ್ಲ ಎಂಬುದು ದೊಡ್ಡ ವಿಷಯ. 10 ಎಸೆತಗಳಲ್ಲಿ ಕೇವಲ ಒಂದು ರನ್ ಗಳಿಸಿ ರಿಷಬ್ ಪಂತ್ ಔಟಾದರು.
ರವೀಂದ್ರ ಜಡೇಜಾ ತಮ್ಮ ಮೊದಲ ಬೇಟೆಯಾಗಿ ಸನತ್ ಸಂಗ್ವಾನ್ ಅವರನ್ನು ಬಲಿ ಪಡೆದರೆ, ಇದಾದ ಬಳಿಕ 44 ರನ್ ಗಳಿಸಿ ಕ್ರೀಸ್ನಲ್ಲಿದ್ದ ಯಶ್ ಧುಲ್ ಅವರ ವಿಕೆಟ್ ಕೂಡ ಪಡೆದರು. ಮೂರನೇ ವಿಕೆಟ್ ಆಗಿ ಜಡೇಜಾ ಡೆಲ್ಲಿ ನಾಯಕ ಆಯುಷ್ ಬಧೋನಿಯನ್ನೂ ಬಲಿಪಶು ಮಾಡಿದರು. ಆ ನಂತರವೂ ಮ್ಯಾಜಿಕ್ ಮಾಡಿದ ಜಡೇಜಾ, ಹರ್ಷ್ ತ್ಯಾಗಿ ಮತ್ತು ನವದೀಪ್ ಸೈನಿ ಅವರ ವಿಕೆಟ್ಗಳನ್ನು ಪಡೆಯುವಲ್ಲಿ ಯಶಸ್ವಿಯಾದರು ಮತ್ತು ಆ ಮೂಲಕ ಅವರು ಪ್ರಥಮ ದರ್ಜೆ ಕ್ರಿಕೆಟ್ನಲ್ಲಿ 35 ನೇ ಬಾರಿಗೆ ಇನ್ನಿಂಗ್ಸ್ನಲ್ಲಿ ಐದು ವಿಕೆಟ್ಗಳನ್ನು ಪಡೆದ ಸಾಧನೆಯನ್ನು ಸಾಧಿಸಿದರು.
ನಿಮ್ಮ ಪ್ರತಿಕ್ರಿಯೆ ಏನು?






