RCB Celebration: ಸಂಭ್ರಮಾಚರಣೆ ವೇಳೆ ದುರಂತ: ಓರ್ವ ಸಾವು, ಹಲವರಿಗೆ ಗಾಯ

ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಐಪಿಎಲ್ ಗೆಲುವಿನ ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ದುರಂತ ಸಂಭವಿಸಿ ಓರ್ವ ಆರ್ಸಿಬಿ ಅಭಿಮಾನಿ ಮೃತಪಟ್ಟಿದ್ದಾನೆ. ಬೆಂಗಳೂರು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಅಭಿಮಾನಿಗಳ ಸಂಖ್ಯೆ ಹೆಚ್ಚಾಗಿದ್ದರಿಂದ ನೂಕುನುಗ್ಗಲು ಉಂಟಾಗಿ ದೊಡ್ಡ ದುರಂತವೇ ಸಂಭವಿಸಿದೆ. ಕಾಲ್ತುಳಿತದಿಂದ 20 ಮಂದಿಗೆ ಗಾಯಗಳಾಗಿದ್ದು, ಓರ್ವ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
ಜೂನ್ 3 ರಂದು ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಆರ್ಸಿಬಿ ಮತ್ತು ಪಂಜಾಬ್ ಕಿಂಗ್ಸ್ ನಡುವೆ ಫೈನಲ್ ಹಣಾಹಣಿ ನಡೆದಿತ್ತು. ಈ ರೋಚಕ ಪಂದ್ಯಾಟದಲ್ಲಿ 6 ರನ್ಗಳ ಅಂತರದಲ್ಲಿ ಆರ್ಸಿಬಿ ಭರ್ಜರಿ ಗೆಲುವು ಕಂಡಿತ್ತು. ಅಲ್ಲದೇ ಇಂದು ಆರ್ಸಿಬಿ ತಂಡ ಕಪ್ ಜೊತೆ ಬೆಂಗಳೂರಿಗೆ ಕಾಲಿಟ್ಟಿದೆ.
ನಿಮ್ಮ ಪ್ರತಿಕ್ರಿಯೆ ಏನು?






