RCB IPL Celebration: ಬೆಂಗಳೂರಿಗೆ ಎಂಟ್ರಿ ಕೊಟ್ಟ ರೆಡ್ ಆರ್ಮಿ: ಕೊಹ್ಲಿಗೆ ಕನ್ನಡ ಭಾವುಟ ನೀಡಿ ಸ್ವಾಗತಿಸಿ ಡಿಸಿಎಂ..!

ಜೂನ್ 4, 2025 - 15:49
 0  15
RCB IPL Celebration: ಬೆಂಗಳೂರಿಗೆ ಎಂಟ್ರಿ ಕೊಟ್ಟ ರೆಡ್ ಆರ್ಮಿ: ಕೊಹ್ಲಿಗೆ ಕನ್ನಡ ಭಾವುಟ ನೀಡಿ ಸ್ವಾಗತಿಸಿ ಡಿಸಿಎಂ..!

ಬೆಂಗಳೂರು: ಐಪಿಎಲ್ ಟ್ರೋಫಿಗಾಗಿ 18 ವರ್ಷಗಳ ಕಾಯುವಿಕೆ ಕೊನೆಗೂ ಮುಗಿದಿದೆ. ಪಂಜಾಬ್ ಕಿಂಗ್ಸ್ ಸೋಲಿಸಿ ಕಪ್​ಗೆ ಮುತ್ತಿಡುವ ಮೂಲಕ ಆರ್​​ಸಿಬಿ ಚಾಂಪಿಯನ್ ಆಗಿದೆ. 18ನೇ ಆವೃತ್ತಿಯ ಐಪಿಎಲ್ ಫೈನಲ್ ಗೆದ್ದು ಚಾಂಪಿಯನ್ ಆಗಿರುವ ಸಂಭ್ರಮದಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರರು ನಗರಕ್ಕೆ ಬಂದಿದ್ದಾರೆ. 

ಎಚ್ಎಎಲ್ ವಿಮಾನ ನಿಲ್ದಾಣಕ್ಕೆ ಬಂದಿಳಿದ ಆರ್‌ಸಿಬಿ ತಂಡವನ್ನ ಉಪಮುಖ್ಯಮಂತ್ರಿ ಡಿ.ಕೆ‌.ಶಿವಕುಮಾರ್ ಅವರೇ ಖುದ್ದು ಸ್ವಾಗತಿಸಿದರು. ಆರ್‌ಸಿಬಿ ತಂಡ ಬೆಂಗಳೂರು ತಲುಪುತ್ತಿದ್ದಂತೆ ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿದೆ. 

ಇದೇ ಸಂದರ್ಭದಲ್ಲಿ ವಿರಾಟ್ ಕೊಹ್ಲಿಗೆ ಕನ್ನಡ ಭಾವುಟ ನೀಡಿ ಡಿಸಿಎಂ ಡಿ.ಕೆ ಶಿವಕುಮಾರ್ ಸ್ವಾಗತಿಸಿದ್ದು ಗಮನ ಸೆಳೆಯಿತು.ಕನಕಪುರದಿಂದ ನೇರವಾಗಿ ವಿಮಾನ ನಿಲ್ದಾಣಕ್ಕೆ ಬಂದ ಡಿಸಿಎಂ ಡಿಕೆಶಿ ಆರ್‌ಸಿಬಿ ತಂಡದ ಆಟಗಾರರನ್ನು ಸ್ವಾಗತಿಸಲು ಸೇರಿದ್ದ ಸಾವಿರಾರು ಅಭಿಮಾನಿಗಳತ್ತ ಕೈಬೀಸಿ ಮುಂದೆ ಹೋದರು.

ಇತ್ತ ವಿಧಾನಸೌಧದಲ್ಲಿ ಆರ್​ಸಿಬಿಗೆ ಸನ್ಮಾನ ಕಾರ್ಯಕ್ರಮ ನಡೆಯುತ್ತಿರುವ ಹಿನ್ನೆಲೆ ತಮ್ಮ ನೆಚ್ಚಿನ ತಂಡದ ಆಟಗಾರರನ್ನು ಕಣ್ಣು ತುಂಬಿಸಲು ಸಾವಿರಾರು ಸಂಖ್ಯೆಯಲ್ಲಿ ಆರ್​ಸಿಬಿ ಅಭಿಮಾನಿಗಳು ವಿಧಾನಸೌಧದ ಮುಂಭಾಗದ ರಸ್ತೆ ಪಕ್ಕ ಜಮಾಯಿಸಿದ್ದಾರೆ. ಆರ್​ಸಿಬಿ ತಂಡದ ಪರ ಘೋಷಣೆ ಕೂಗುತ್ತ ತಮ್ಮ ಹರ್ಷ ವ್ಯಕ್ತಪಡಿಸುತ್ತಿದ್ದಾರೆ.

ವಿಧಾನಸೌಧ ಗ್ರಾಂಡ್ ಸ್ಟೆಪ್ಸ್ ಮುಂದೆ ಆರ್​​ಸಿಬಿ ತಂಡಕ್ಕೆ ರಾಜ್ಯ ಸರ್ಕಾರ ಸನ್ಮಾನಿಸಲಿದೆ. ಸಿಎಂ ಸಿದ್ದರಾಮಯ್ಯ ಆರ್​ಸಿಬಿ ತಂಡವನ್ನು ಸನ್ಮಾನಿಸಲಿದ್ದಾರೆ. ಈ ನಿಟ್ಟಿನಲ್ಲಿ ವೇದಿಕೆ ಸಿದ್ಧಪಡಿಸಲಾಗುತ್ತಿದೆ. ವೇದಿಕೆಯಲ್ಲಿ ಚಾಂಪಿಯನ್ಸ್ ಎಂಬ ಬರಹ ಆರ್​​ಸಿಬಿ ತಂಡವನ್ನು ಬರ ಮಾಡಿಕೊಳ್ಳಲಿದೆ. ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್, ಗೃಹ ಸಚಿವ ಜಿ.ಪರಮೇಶ್ವರ ಸೇರಿದಂತೆ ಸಚಿವರು ಪಾಲ್ಗೊಳ್ಳಲಿದ್ದಾರೆ.

 

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow