Sad News: ಪೋಷಕರೇ ಎಚ್ಚರ! ಆಟವಾಡುತ್ತಿದ್ದ ಮಗು ನೀರಿನ ತೊಟ್ಟಿಗೆ ಬಿದ್ದು ಸಾವು..!

ಜನವರಿ 20, 2025 - 11:59
 0  9
Sad News: ಪೋಷಕರೇ ಎಚ್ಚರ! ಆಟವಾಡುತ್ತಿದ್ದ ಮಗು ನೀರಿನ ತೊಟ್ಟಿಗೆ ಬಿದ್ದು ಸಾವು..!

ತುಮಕೂರು: ಪುಟ್ಟ ಮಕ್ಕಳು ಇರುವ ಮನೆಯಲ್ಲಿ ಆ ಕಂದಮ್ಮಗಳ ಬಗ್ಗೆ ಎಷ್ಟು ಎಚ್ಚರದಿಂದ ಇದ್ದರೂ ಸಾಕಾಗೋದಿಲ್ಲ. ಮಕ್ಕಳಿರುವ ಮನೆಯಲ್ಲಿ ಮೈಯಲ್ಲೆಲ್ಲಾ ಕಣ್ಣಾಗಿರಬೇಕು. ಒಂದು ಚೂರು ಎಚ್ಚರ ತಪ್ಪಿದರೂ ಏನಾದರೂ ಯಡವಟ್ಟಾಗಿರುತ್ತದೆ. ಇದು ಮಕ್ಕಳ ತಪ್ಪೇನಲ್ಲ, ಸರಿ ತಪ್ಪು ಏನೂ ಅರಿಯದ ಮಕ್ಕಳು ತಪ್ಪುಗಳು ಮಾಡೋದು ಸಹಜ.

ಇಲ್ಲೊಂದು ಕಡೆ ಪೋಷಕರ ನಿರ್ಲಕ್ಷ್ಯದಿಂದ ಒಂದೂವರೆ ವರ್ಷದ ಪುಟ್ಟ ಮಗು ಅನ್ಯಾಯವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಹೌದು ಮನೆಯ ನೀರಿನ ತೊಟ್ಟಿಗೆ ಬಿದ್ದು ಮಗು ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಜಿ ಹೊಸಹಳ್ಳಿಯಲ್ಲಿ ನಡೆದಿದೆ. ಗ್ರಾಮದ ಅಂಗಡಿ ಮಂಜಣ್ಣನವರ ಪುತ್ರ ಕುಶಾಲ್ 3 ಮೃತ ಮಗುವಾಗಿದ್ದು ಆಕಸ್ಮಿಕವಾಗಿ ಮನೆಯ ಮುಂದಿನ ನೀರಿನ ತೊಟ್ಟಿಗೆ ಬಿದ್ದು ಮೃತ ಪಟ್ಟಿದೆ.

ಮನೆ ಮುಂದೆ ಆಟವಾಡುತ್ತಿದ್ದ ಮಗು ಕಾಣದಿದ್ದಾಗ ಕುಟುಂಬಸ್ಥರ ಹುಡುಕಾಟ ನಡೆಸಿದ್ದಾರೆ. ಬಳಿಕ ನೀರಿನ ತೊಟ್ಟಿಯಲ್ಲಿ ಬಿದ್ದಿರುವುದು ಪತ್ತೆಯಾಗಿದೆ. ತಕ್ಷಣವೇ ಆಸ್ಪತ್ರೆಗೆ ಕರೆದುಕೊಂಡು ಹೋದರೂ ಪ್ರಯೋಜನವಾಗಿಲ್ಲ, ಯಾಕಂದ್ರೆ ಅಷ್ಟರಲ್ಲೇ ಮಗು ಸಾವನ್ನಪ್ಪಿದೆ. ಇನ್ನೂ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಗುಬ್ಬಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.   

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow