Sandur By-Election: ಬಂಗಾರು ಹನುಮಂತು NDA ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ!

ಬಳ್ಳಾರಿ: ಕರ್ನಾಟಕ ಉಪ ಕದನದ ಕುರುಕ್ಷೇತ್ರ ರಂಗೇರುತ್ತಿದೆ. ಗಣಿನಾಡಿನ ಸಂಡೂರಿನಲ್ಲೂ ಬೈ ಎಲೆಕ್ಷನ್ ಧೂಳ್ ಎಬ್ಬಿಸಿದೆ. ಕಾಂಗ್ರೆಸ್ ಅಭ್ಯರ್ಥಿಯಾಗಿ ಇ ತುಕಾರಾಂ ಪತ್ನಿ ಅನ್ನಪೂರ್ಣ ಅಖಾಡಕ್ಕೆ ಧುಮುಕಿದ್ದಾರೆ. ನಿನ್ನೆ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಇವತ್ತು ಅನ್ನಪೂರ್ಣ ವಿರುದ್ಧ ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತು ತಮ್ಮ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.
ಸಂಡೂರು ತಾಲೂಕು ಕಛೇರಿಗೆ ಬಿಜೆಪಿ ನಾಯಕರು ಜೊತೆ ಆಗಮಿಸಿದ ಬಂಗಾರು ಹನುಮಂತು ನಾಮಪತ್ರ ಸಲ್ಲಿಕೆ ಮಾಡಿದರು. ಈ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಜನಾರ್ದನ ರೆಡ್ಡಿ, ಭಗವಂತ ಖೂಬಾ, ಪತ್ನಿ ರೂಪಾಶ್ರೀ ಜೊತೆ ಸೇರಿ ನಾಮಪತ್ರ ಸಲ್ಲಿಕೆ ಮಾಡಿದರು.
ನಾಮಪತ್ರ ಸಲ್ಲಿಕೆಯ ಮುನ್ನ ಬಿಜೆಪಿ ನಾಯಕರು ತೆರೆದ ವಾಹನದಲ್ಲಿ ರೋಡ್ ಶೋ ನಡೆಸಿದರು. ಈ ವೇಳೆ ಮಾತನಾಡಿದ ವಿಜಯೇಂದ್ರ, ಸೂರ್ಯ ಚಂದ್ರ ಇರುವುದು ಎಷ್ಟು ಸತ್ಯವೂ ಬಂಗಾರು ಹನುಮಂತ ಗೆಲವು ಅಷ್ಟೇ ಸತ್ಯ. 20 ವರ್ಷದಿಂದ ಸಂಡೂರಿನಲ್ಲಿ ಕಾಂಗ್ರೆಸ್ ಇದೆ. ಒಂದು ಬಸ್ ನಿಲ್ದಾಣ ನಿರ್ಮಾಣ ಮಾಡಲು ಸಾಧ್ಯವಾಗಿಲ್ಲ ಎಂದು ಆಕ್ರೋಶ ಹೊರಹಾಕಿದರು.
ನಿಮ್ಮ ಪ್ರತಿಕ್ರಿಯೆ ಏನು?






