Sanjana Galrani: ಯುದ್ಧವು ಭಾರತದ ಆರ್ಥಿಕತೆಗೆ ಹೊಡೆತ ನೀಡುತ್ತದೆ: ನಟಿ ಸಂಜನಾ ಗಲ್ರಾನಿ `ಆಪರೇಷನ್ ಸಿಂಧೂರ' ಬಗ್ಗೆ ಹೇಳಿದ್ದೇನು..?

ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಉಗ್ರರ ನೆಲೆಗಳ ಮೇಲೆ ಭಾರತೀಯ ಸೇನೆಯು ದಾಳಿ ನಡೆಸಿ, ಉಗ್ರರ ಹುಟ್ಟಡಗಿಸಿದೆ. ಭಾರತೀಯ ಸೇನೆಯ ಈ ದಿಟ್ಟ ಆಪರೇಷನ್ ಸಿಂಧೂರ ದಾಳಿಯ ಬಗ್ಗೆ ಇಡೀ ದೇಶವೆ ಹೆಮ್ಮೆ ಪಡುತ್ತಿದೆ. ಕನ್ನಡ ಚಿತ್ರರಂಗದ ಕೆಲ ಗಣ್ಯರು ಸಹ ಸೇನೆಯ ಈ ದಿಟ್ಟ ಉತ್ತರವನ್ನು ಮನಸಾರೆ ಕೊಂಡಾಡಿದ್ದಾರೆ.
ಇದರ ನಡುವೆ ನಟಿ ಸಂಜನಾ ಗಲ್ರಾನಿ ಯುದ್ಧ ಬೇಡ ಎಂದು ಪೋಸ್ಟ್ ಹಂಚಿಕೊಂಡಿದ್ದಾರೆ. ‘ಯಾವುದೇ ಕ್ರಿಯೆಗೆ ಸಮಾನವಾದ ಅಥವಾ ವಿರುದ್ಧವಾದ ಪ್ರತಿಕ್ರಿಯೆ ಇದ್ದೇ ಇರುತ್ತದೆ. ನಾನು ಸಂಪೂರ್ಣ ದೇಶಪ್ರೇಮಿ. ಅದರ ಜೊತೆಗೆ ನಾನು ಶಾಂತಿ ಪ್ರೇಮಿಯೂ ಹೌದು. (Peace ಸ್ಪೆಲ್ಲಿಂಗ್ ತಪ್ಪಾಗಿ ಬರೆದಿದ್ದಾರೆ).
ಯಾವುದೇ ರೀತಿಯ ಸಣ್ಣ ಅಥವಾ ಯುದ್ಧ ದೇಶದ ಗೌರವಕ್ಕೆ ಒಳ್ಳೆಯದಲ್ಲ. ಯುದ್ಧವು ಭಾರತದ ಆರ್ಥಿಕತೆಗೆ ಹೊಡೆತ ನೀಡುತ್ತದೆ. ಜನ ಜೀವನ ಸ್ತಬ್ಧಗೊಳ್ಳುತ್ತದೆ. ಯುದ್ಧದಲ್ಲಿ ಪಾಲ್ಗೊಂಡ ದೇಶಗಳಿಗೆ ಆಗುವ ನಷ್ಟ ಅಗಣ್ಯ ಮತ್ತು ಅದರ ಪರಿಹಾರ ಸಾಧ್ಯವೇ ಇಲ್ಲ’ ಎಂದಿದ್ದಾರೆ ನಟಿ.
‘ಎಲ್ಲವೂ ಶಾಂತರೀತಿಯಿಂದ ಶೀಘ್ರವೇ ಅಂತ್ಯವಾಗಲಿದೆ ಎಂಬ ನಿರೀಕ್ಷೆ ನನ್ನದು, ಜೈ ಹಿಂದ್’ ಎಂದು ನಟಿ ಸಂಜನಾ ಗಲ್ರಾನಿ ಇನ್ಸ್ಟಾಗ್ರಾಂನಲ್ಲಿ ಬರೆದುಕೊಂಡಿದ್ದಾರೆ. ಆದರೆ ನಟಿಯ ಹೇಳಿಕೆ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವಿರೋಧ ವ್ಯಕ್ತವಾಗಿದೆ.
ನಿಮ್ಮ ಪ್ರತಿಕ್ರಿಯೆ ಏನು?






