Sharon Raj Murder: ಪ್ರಿಯಕರನಿಗೆ ವಿಷ ಹಾಕಿ ಕೊಂದಿದ್ದ ಪ್ರೇಯಸಿಗೆ ಮರಣದಂಡನೆ ಶಿಕ್ಷೆ..!

ತಿರುವನಂತಪುರ: ಪ್ರೀತಿ ಅಂದಾಗ ಅದರ ಬೆನ್ನಲ್ಲೇ ಮೋಸ, ಅನುಮಾನ ಬರುವುದು ಇಂಥ ಪ್ರಕರಣಗಳ ಕಾರಣದಿಂದಾಗಿ. ಬ್ರೇಕಪ್ ಮಾಡಿಕೊಳ್ಳಲು ನಿರಾಕರಿಸಿದ ಎನ್ನುವ ಏಕೈಕ ಕಾರಣಕ್ಕೆ ಪ್ರೇಮಿಯಾಗಿದ್ದ 23 ವರ್ಷದ ಕಾಲೇಜ್ ಹುಡುಗನಿಗೆ ವಿಷವಿಟ್ಟು ಸಾಯಿಸಿದ ಘಟನೆ ಕೇರಳದ ತಿರುವನಂತಪುರದಲ್ಲಿ ನಡೆದಿತ್ತು.
ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನೆಯ್ಯಟ್ಟಿಂಕರ ಸೆಷನ್ಸ್ ನ್ಯಾಯಾಲಯವು ಆತನ ಪ್ರೇಯಸಿ ಗ್ರೀಷ್ಮಾಗೆ ಜೀವಾವಧಿ ಶಿಕ್ಷೆ ವಿಧಿಸಿದೆ. ತನ್ನ ವಯಸ್ಸಿನ ಕಾರಣ ಮತ್ತು ತನ್ನ ವಿರುದ್ಧ ಯಾವುದೇ ಕ್ರಿಮಿನಲ್ ದಾಖಲೆಯಿಲ್ಲ ಎಂಬ ಆಕೆಯ ಹೇಳಿಕೆಯನ್ನು ನ್ಯಾಯಾಲಯ ತಿರಸ್ಕರಿಸಿತ್ತು. ಕೊಲೆಯ ಪ್ರಕರಣದಲ್ಲಿ ಅಪರಾಧಿಯ ವಯಸ್ಸು ಮತ್ತು ಇತರ ಸಂದರ್ಭಗಳನ್ನು ಪರಿಗಣಿಸುವ ಅಗತ್ಯವಿಲ್ಲ ಎಂದು ಕೋರ್ಟ್ ಹೇಳಿದೆ. ಸೆಷನ್ಸ್ ನ್ಯಾಯಾಲಯವು ಈ ಪ್ರಕರಣದ ಮೂರನೇ ಆರೋಪಿಯಾಗಿರುವ ಆಕೆಯ ಚಿಕ್ಕಪ್ಪ ನಿರ್ಮಲಕುಮಾರನ್ ನಾಯರ್ಗೆ 3 ವರ್ಷಗಳ ಜೈಲು ಶಿಕ್ಷೆಯನ್ನು ಕೂಡ ವಿಧಿಸಿದೆ.
24 ವರ್ಷದ ಅಪರಾಧಿ ಗ್ರೀಷ್ಮಾ ಮರಣದಂಡನೆ ಶಿಕ್ಷೆ ಅನುಭವಿಸಿದ ಭಾರತದ ಅತ್ಯಂತ ಕಿರಿಯ ಯುವತಿಯಾಗಿದ್ದಾಳೆ. ತನ್ನ ಶೈಕ್ಷಣಿಕ ಸಾಧನೆಗಳು, ಹಿಂದೆ ಯಾವುದೇ ಅಪರಾಧ ಮಾಡಿಲ್ಲ ಮತ್ತು ತಾನು ತನ್ನ ಹೆತ್ತವರ ಏಕೈಕ ಮಗಳು ಎಂಬ ಅಂಶವನ್ನು ಉಲ್ಲೇಖಿಸಿ ಆಕೆ ಶಿಕ್ಷೆಯಲ್ಲಿ ಸಡಿಲಿಕೆಯನ್ನು ಕೋರಿದ್ದಳು. ಆದರೆ, 586 ಪುಟಗಳ ತೀರ್ಪಿನಲ್ಲಿ ಅಪರಾಧಿಯ ವಯಸ್ಸು ಮತ್ತು ಇತರ ಸಂದರ್ಭಗಳನ್ನು ಪರಿಗಣಿಸಿ ಈ ಬಗ್ಗೆ ಗಮನಹರಿಸುವ ಅಗತ್ಯವಿಲ್ಲ ಎಂದು ನ್ಯಾಯಾಲಯ ಹೇಳಿದೆ.
ನಿಮ್ಮ ಪ್ರತಿಕ್ರಿಯೆ ಏನು?






