Shivarajkumar: ನಟ ಶಿವರಾಜ್ ಕುಮಾರ್ ಮನೆಗೆ ಭೇಟಿ ನೀಡಿದ ಸಿದ್ಧರಾಮಯ್ಯ..!

ಒಂದು ತಿಂಗಳ ನಂತರ ಸ್ಯಾಂಡಲ್ವುಡ್ನ ಹ್ಯಾಟ್ರಿಕ್ ಹೀರೋ ಶಿವರಾಜ್ಕುಮಾರ್ ಅವರು ಅಮೇರಿಕಾದಿಂದ ಬೆಂಗಳೂರಿಗೆ ಬಂದಿದ್ದಾರೆ. ಶಿವರಾಜ್ ಕುಮಾರ್ ಅವರು ಕ್ಯಾನ್ಸರ್ ಸರ್ಜರಿಗಾಗಿ ಅಮೇರಿಕಾಗೆ ಹೋಗಿದ್ದರು. ಜನವರಿ 24 ಕ್ಕೆ ರಾತ್ರಿ ಅಮೇರಿಕಾದಿಂದ ಹೊರಟಿದ್ದ ಶಿವಣ್ಣ 26ಕ್ಕೆ ಬೆಂಗಳೂರು ತಲುಪಿದ್ದಾರೆ.
ಇದೀಗ ಕ್ಯಾನ್ಸರ್ ಚಿಕಿತ್ಸೆ ಪಡೆದು ವಾಪಸ್ ಆಗಿರುವ ಶಿವರಾಜ್ ಕುಮಾರ್ ಅವರ ಆರೋಗ್ಯ ವಿಚಾರಿಸುವ ಸಲುವಾಗಿ ಸಿಎಂ ಸಿದ್ದರಾಮಯ್ಯ ನೇರವಾಗಿ ನಿವಾಸಕ್ಕೆ ಭೇಟಿ ಕೊಟ್ಟಿದ್ದಾರೆ. ನಟ ಶಿವರಾಜ್ ಕುಮಾರ್ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು,
ಆಪರೇಷನ್ ಆದ ನೆಕ್ಸ್ಟ್ ಡೇ ಫೋನ್ ಮಾಡಿದ್ದೆ. ಆಪರೇಷನ್ ಚೆನ್ನಾಗಿ ಆಗಿದೆ. ತೊಂದರೆ ಇಲ್ಲ ಅಂತ ಡಾಕ್ಟರ್ ಹೇಳಿದ್ದಾರೆ. ಈಗ ಆಪರೇಷನ್ ಸಕಸ್ಸ್ ಆಗಿದೆ. ಅವರು ಮುಂದಿನ ತಿಂಗಳಿನಿಂದ ಶೂಟಿಂಗ್ ಎಲ್ಲ ಹೋಗ್ತಾರಂತೆ. ಸದ್ಯಕ್ಕೆ ಶಿವಣ್ಣ ಆರೋಗ್ಯವಾಗಿದ್ದಾರೆ ಎಂದರು.
ನಿಮ್ಮ ಪ್ರತಿಕ್ರಿಯೆ ಏನು?






