SM ಕೃಷ್ಣ ನಿಧನ: ಅಂತಿಮ ದರ್ಶನಕ್ಕೆ ಬಂದ ಅಶ್ವಿನಿ ಪುನೀತ್ ರಾಜ್ ಕುಮಾರ್..!

ಬೆಂಗಳೂರು: ಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ತಡರಾತ್ರಿ ನಿಧನರಾಗಿದ್ದು, ಸದಾಶಿವನಗರದ ನಿವಾಸಕ್ಕೆ ಅಶ್ವಿನಿ ಪುನೀತ್ ರಾಜ್ ಕುಮಾರ್ ಆಗಮಿಸಿ ಅಂತಿಮ ದರ್ಶನ ಪಡೆದಿದ್ದಾರೆ. ಯುವರಾಜ್ಕುಮಾರ್ ಜೊತೆ ಪುನೀತ್ ಪತ್ನಿ ಅಶ್ವಿನಿ ಆಗಮಿಸಿ ಎಸ್.ಎಂ. ಕೃಷ್ಣ ಅವರ ಅಂತಿಮ ದರ್ಶನ ಪಡೆದರು.
ಎಸ್.ಎಂ ಕೃಷ್ಣ ನಿಧನರಾಗಿದ್ದು, ನಾಳೆ ರಾಜ್ಯಾದ್ಯಂತ ಎಲ್ಲಾ ಶಾಲಾ ಕಾಲೇಜುಗಳಿಗೆ ಹಾಗೂ ಸರ್ಕಾರಿ ಕಚೇರಿಗಳಿಗೆ ಸಾರ್ವತ್ರಿಕ ರಜೆ ಘೋಷಿಸಿದೆ. ಮೂರು ದಿನಗಳ ಕಾಲ ರಾಜ್ಯಾದ್ಯಂತ ಶೋಕಾಚರಣೆಯನ್ನು ಆಚರಿಸಲಾಗುವುದು. ಈ ಅವಧಿಯಲ್ಲಿ ಯಾವುದೇ ಅಧಿಕೃತ ಮನೋರಂಜನಾ ಕಾರ್ಯಕ್ರಮಗಳು ಇರುವುದಿಲ್ಲ. ಸರ್ಕಾರದ ಎಲ್ಲಾ ಕಟ್ಟಡಗಳ ಮೇಲೂ ರಾಷ್ಟ್ರಧ್ವಜವನ್ನು ಅರ್ಧಮಟ್ಟದಲ್ಲಿ ಹಾರಿಸಲಾಗುವುದು.
ನಿಮ್ಮ ಪ್ರತಿಕ್ರಿಯೆ ಏನು?






