SM ಕೃಷ್ಣ ನಿಧನ: ಅಂತಿಮ ದರ್ಶನಕ್ಕೆ ಬಂದ ಅಶ್ವಿನಿ ಪುನೀತ್ ರಾಜ್‌ ಕುಮಾರ್..!

ಡಿಸೆಂಬರ್ 10, 2024 - 13:56
 0  30
SM ಕೃಷ್ಣ ನಿಧನ: ಅಂತಿಮ ದರ್ಶನಕ್ಕೆ ಬಂದ ಅಶ್ವಿನಿ ಪುನೀತ್ ರಾಜ್‌ ಕುಮಾರ್..!

ಬೆಂಗಳೂರು: ಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್​ಎಂ ಕೃಷ್ಣ ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ತಡರಾತ್ರಿ ನಿಧನರಾಗಿದ್ದು, ಸದಾಶಿವನಗರದ ನಿವಾಸಕ್ಕೆ ಅಶ್ವಿನಿ ಪುನೀತ್ ರಾಜ್‌ ಕುಮಾರ್ ಆಗಮಿಸಿ ಅಂತಿಮ ದರ್ಶನ ಪಡೆದಿದ್ದಾರೆ. ಯುವರಾಜ್‌ಕುಮಾರ್ ಜೊತೆ ಪುನೀತ್‌ ಪತ್ನಿ ಅಶ್ವಿನಿ ಆಗಮಿಸಿ ಎಸ್.ಎಂ. ಕೃಷ್ಣ ಅವರ ಅಂತಿಮ ದರ್ಶನ ಪಡೆದರು. 

ಎಸ್​​.ಎಂ ಕೃಷ್ಣ ನಿಧನರಾಗಿದ್ದು, ನಾಳೆ ರಾಜ್ಯಾದ್ಯಂತ ಎಲ್ಲಾ ಶಾಲಾ ಕಾಲೇಜುಗಳಿಗೆ ಹಾಗೂ ಸರ್ಕಾರಿ ಕಚೇರಿಗಳಿಗೆ ಸಾರ್ವತ್ರಿಕ ರಜೆ ಘೋಷಿಸಿದೆ. ಮೂರು ದಿನಗಳ ಕಾಲ ರಾಜ್ಯಾದ್ಯಂತ ಶೋಕಾಚರಣೆಯನ್ನು ಆಚರಿಸಲಾಗುವುದು. ಈ ಅವಧಿಯಲ್ಲಿ ಯಾವುದೇ ಅಧಿಕೃತ ಮನೋರಂಜನಾ ಕಾರ್ಯಕ್ರಮಗಳು ಇರುವುದಿಲ್ಲ. ಸರ್ಕಾರದ ಎಲ್ಲಾ ಕಟ್ಟಡಗಳ ಮೇಲೂ ರಾಷ್ಟ್ರಧ್ವಜವನ್ನು ಅರ್ಧಮಟ್ಟದಲ್ಲಿ ಹಾರಿಸಲಾಗುವುದು.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow