SM ಕೃಷ್ಣ ಪಂಚಭೂತಗಳಲ್ಲಿ ಲೀನ: ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ

ಡಿಸೆಂಬರ್ 11, 2024 - 18:06
 0  23
SM ಕೃಷ್ಣ ಪಂಚಭೂತಗಳಲ್ಲಿ ಲೀನ: ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ

 

ಮಂಡ್ಯ: ಮಂಗಳವಾರ ವಿಧಿವಶರಾದ ಮಾಜಿ ಸಿಎಂ ಎಸ್‌.ಎಂ.ಕೃಷ್ಣ ಅವರ ಪಾರ್ಥಿವ ಶರೀರವನ್ನು ಮದ್ದೂರು ತಾಲೂಕಿನ ಸೋಮನಹಳ್ಳಿಯ ಹೊರವಲಯದ ಕೆಫೆ ಕಾಫಿ ಡೇ ಆವರಣಕ್ಕೆ ಕರೆತರಲಾಯಿತು. ವೇಳೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ಸೇರಿದಂತೆ ಅನೇಕ ಗಣ್ಯರು ಅಂತಿಮ ದರ್ಶನ ಪಡೆದರು.

ಇದೀಗ ಎಸ್‌.ಎಂ ಕೃಷ್ಣ ಅವರು ತಮ್ಮ ಬದುಕಿನ ಯಾತ್ರೆ ಮುಗಿಸಿ, ಪಂಚಭೂತಗಳಲ್ಲಿ ಲೀನವಾಗಿದ್ದಾರೆ. ಇಂದು (ಡಿ.11) ಸಂಜೆ ತಮ್ಮ ಹುಟ್ಟೂರು ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಸೋಮನಹಳ್ಳಿಯ ಹೊರವಲಯದ ಕೆಫೆ ಕಾಫಿ ಡೇ ಆವರಣದಲ್ಲಿ ಒಕ್ಕಲಿಗ ಸಂಪ್ರದಾಯಂತೆ ಹಾಗೂ ಕುಶಾಲತೋಪು ಸಿಡಿಸಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯ ಸಂಸ್ಕಾರ ನೆರವೇರಿಸಲಾಯ್ತು.

ಇದಕ್ಕೂ ಮುನ್ನ ಪೊಲೀಸರ ತಂಡದಿಂದ ರಾಷ್ಟ್ರಗೀತೆ ನಮನ ಸಲ್ಲಿಸಲಾಯಿತು. ನಂತರ ಮುಖ್ಯಮಂತ್ರಿ ಹಾಗೂ ಗೃಹ ಸಚಿವರು, ಎಸ್ಎಂಕೆ ಪತ್ನಿ ಪ್ರೇಮಾ ಕೃಷ್ಣ ಅವರಿಗೆ ರಾಷ್ಟ್ರಧ್ವಜ ಹಸ್ತಾಂತರಿಸಿದರು. ಬಳಿಕ ಭಾನುಪ್ರಕಾಶ್ ಶರ್ಮಾ ಹಾಗೂ ಇತರ 15 ವೈದಿಕರ ತಂಡವು ಮಂತ್ರಘೋಷಗಳೊಂದಿಗೆ ಅಂತಿಮ ವಿಧಿವಿಧಾನ ನೆರವೇರಿಸಿದ ಬಳಿಕ, ಎಸ್‌.ಎಂ ಕೃಷ್ಣರ ಮೊಮ್ಮಗ ಅಮರ್ಥ್ಯ ಹೆಗ್ಡೆ ಚಿತೆಗೆ ಅಗ್ನಿಸ್ಪರ್ಶ ಮಾಡಿದರು.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow