Sumalatha Ambareesh: ನನ್ನ ಉಸಿರು ಇರೋವರೆಗೂ ದರ್ಶನ್ ನನ್ನ ಮಗನೇ: ಸುಮಲತಾ ಅಂಬರೀಷ್

ಮಂಡ್ಯ: ನನ್ನ ಲೈಫ್ ಇರುವವರೆಗೂ ದರ್ಶನ್ ನನ್ನ ಮಗನೇ ಎಂದು ಮಂಡ್ಯದ ಮಾಜಿ ಸಂಸದೆ ಸುಮಲತಾ ಅಂಬರೀಷ್ ಹೇಳಿದ್ದಾರೆ. ಮಂಡ್ಯದಲ್ಲಿ ನಿನ್ನೆ ಸುದ್ದಿಗಾರರ ಜೊತೆ ಮಾತನಾಡಿದ ಅವರು, ನಾನು ಯಾವಾಗಲೂ ದರ್ಶನ್ ಪರ’ ಎಂದು ಅವರು ಹೇಳಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಅಪರಾಧಿಗಳು ಯಾರು ಎಂದು ಕೋರ್ಟ್ ನಿರ್ಧಾರ ಮಾಡಬೇಕೆ ಹೊರತು ನಾವು ನೀವು ಕುಳಿತು ಚರ್ಚೆ ಮಾಡಿದರೆ ಆಗುವುದಿಲ್ಲ, ಸತ್ಯಾಂಶ ಹೊರಗೆ ಬರುವುದಿಲ್ಲ ಎಂದರು.
ನಾನು ಒಬ್ಬ ತಾಯಿ ಸ್ಥಾನದಲ್ಲಿ ನಿಂತು ದರ್ಶನ್ ಗೆ ಏನು ಹೇಳಬೇಕ ಅದನ್ನು ವೈಯಕ್ತಿಕವಾಗಿ ಹೇಳುತ್ತೇನೆ ಹೊರತು ಮಾಧ್ಯಮಗಳ ಮುಂತೆ ನಿಂತು ಹೇಳುವುದಿಲ್ಲವಲ್ಲ, ತಾಯಿ ಸ್ಥಾನದಲ್ಲಿ ನಾನು ಯಾವಾಗಲೂ ದರ್ಶನ್ ಪರವಾಗಿ ಇದ್ದೇನೆ, ನನ್ನ ಜೀವ ಇರುವವರೆಗೂ ದರ್ಶನ್ ನನ್ನ ಮಗನೇ ಎಂದಿದ್ದಾರೆ.
ವಿಜಯಲಕ್ಷ್ಮಿ ಜೊತೆ ಸಂಪರ್ಕದಲ್ಲಿದ್ದೇನೆ. ದರ್ಶನ್ ಆರೋಗ್ಯದ ಬಗ್ಗೆ ಮಾಹಿತಿ ಪಡೆದುಕೊಂಡಿದ್ದೇನೆ. ದರ್ಶನ್ ಮುಂದೆ ಹಲವು ಸವಾಲುಗಳಿವೆ. ಇನ್ನೂ ಅವರಿಗೆ ಟ್ರೀಟ್ಮೆಂಟ್ ಬೇಕು, ಆರೋಗ್ಯ ಸರಿಪಡಿಸಿಕೊಳ್ಳಬೇಕು. ದರ್ಶನ್ಗೆ ಬೇಲ್ ಬಗ್ಗೆ ಲೀಗಲ್ ಚಾಲೆಂಜ್ಸ್ ಇದೆ. ಅದನ್ನೆಲ್ಲಾ ಸರಿಪಡಿಸಿಕೊಂಡು ಹೊರಗಡೆ ಬರುತ್ತಾರೆ ಎಂಬ ಆಸೆ ಇಟ್ಟುಕೊಂಡಿದ್ದೇವೆ ಎಂದರು.
ನಿಮ್ಮ ಪ್ರತಿಕ್ರಿಯೆ ಏನು?






