Terrorist Encounter: ಕಾಶ್ಮೀರದಲ್ಲಿ ಸೇನೆಯಿಂದ ಭರ್ಜರಿ ಬೇಟೆ: ಮೂವರು ಲಷ್ಕರ್ ಉಗ್ರರ ಎನ್ ಕೌಂಟರ್

ಮೇ 13, 2025 - 13:59
 0  13
Terrorist Encounter: ಕಾಶ್ಮೀರದಲ್ಲಿ ಸೇನೆಯಿಂದ ಭರ್ಜರಿ ಬೇಟೆ: ಮೂವರು ಲಷ್ಕರ್ ಉಗ್ರರ ಎನ್  ಕೌಂಟರ್

ಶ್ರೀನಗರ: ಭಾರತ ಹಾಗೂ ಪಾಕಿಸ್ತಾನ ದ ನಡುವೆ ಯುದ್ಧ ವಿರಾಮ ಘೋಷಣೆಯಾಗಿದ್ದರೂ ಕೂಡ ಪಾಕಿಸ್ತಾನವು ಗಡಿಯಲ್ಲಿ ಗುಂಡಿನ ದಾಳಿಯನ್ನು ಮುಂದುವರೆಸಿದೆ. ಇದೀಗ ಭದ್ರತಾ ಪಡೆಗಳೊಂದಿಗೆ ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಶುಕ್ರೂ ಕೆಲ್ಲರ್ ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಹತನಾಗಿದ್ದಾರೆ.

ಎನೌಕೌಂಟರ್‌ನಲ್ಲಿ ಉನ್ನತ ಭಯೋತ್ಪಾದಕ ಕಮಾಂಡರ್ ಸೇರಿ ಮೂವರು ಉಗ್ರರು ಹತ್ಯೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪ್ರಸ್ತುತ ಕಾರ್ಡನ್ ಮತ್ತು ಶೋಧ ಕಾರ್ಯಾಚರಣೆ (ಸಿಎಎಸ್ಒ) ನಡೆಯುತ್ತಿರುವ ಸ್ಥಳದಲ್ಲಿ ಭಯೋತ್ಪಾದಕರು ಸಿಕ್ಕಿಬಿದ್ದಿದ್ದರು ಎಂದು ಭದ್ರತಾ ಪಡೆಗಳು ತಿಳಿಸಿವೆ.

ದಕ್ಷಿಣ ಕಾಶ್ಮೀರ ಜಿಲ್ಲೆಯ ಶುಕ್ರೂ ಕೆಲ್ಲರ್ ಪ್ರದೇಶದಲ್ಲಿ ಭಯೋತ್ಪಾದಕರು ಇರುವ ಬಗ್ಗೆ ನಿರ್ದಿಷ್ಟ ಮಾಹಿತಿಯ ಆಧಾರದ ಮೇಲೆ ಭದ್ರತಾ ಪಡೆಗಳು ಅಲ್ಲಿ ಸುತ್ತುವರಿದು ಶೋಧ ಕಾರ್ಯಾಚರಣೆ ಪ್ರಾರಂಭಿಸಿದವು. ಭಯೋತ್ಪಾದಕರು ಪ್ರತಿದಾಳಿ ನಡೆಸಿದರು. ಇದು ಪರಸ್ಪರರ ನಡುವೆ ಗುಂಡಿನ ಚಕಮಕಿಗೆ ಕಾರಣವಾಯಿತು.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow