Tungabhadra Dam: ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ತುಂಗಭದ್ರಾ ಡ್ಯಾಂಗೆ ಬಾಗಿನ ಅರ್ಪಣೆ

ಕೊಪ್ಪಳ: ಕೊಪ್ಪಳ, ರಾಯಚೂರು,ಬಳ್ಳಾರಿ ಹಾಗೂ ನೆರೆಯ ಆಂಧ್ರಪ್ರದೇಶ ಕಡಪಾ, ಕರ್ನೂಲು ಜಿಲ್ಲೆಗಳ ರೈತರ ಜೀವನಾಡಿಯಾಗಿರುವ ತುಂಗಭದ್ರಾ ನದಿಗೆ ಹೊಸಪೇಟೆ-ಕೊಪ್ಪಳ ಮಧ್ಯೆ ಇರುವ ಜಲಾಶಯದ 19ನೇ ಕ್ರಸ್ಟ್ಗೇಟು ಸುಮಾರು ಒಂದು ತಿಂಗಳ ಹಿಂದೆ ಕಿತ್ತು ಹೋಗಿ ಅಪಾರ ಪ್ರಮಾಣದ ನೀರು ವ್ಯರ್ಥವಾಗಿ ಹರಿದುಹೋಗುತ್ತಿತ್ತು.
ರೈತರು ಆತಂಕಗೊಂಡಿದ್ದರು. ಸರಕಾರ ಸ್ಥಳೀಯ ಜನಪ್ರತಿನಿಧಿಗಳು, ಎಂಜಿನಿಯರ್ಗಳು ತೋರಿದ ಕಾಳಜಿ ಹಾಗೂ ತಜ್ಞ ಕನ್ಹಯ್ಯ ನಾಯ್ಡು ನೇತೃತ್ವ ನೂರಾರು ಕಾರ್ಮಿಕರ ತಂಡ ಶ್ರಮವಹಿಸಿ ಕೇವಲ ಐದು ದಿನಗಳಲ್ಲಿ ಗೇಟು ಅಳವಡಿಸಿ ನೀರು ಪೋಲಾಗುವುದನ್ನು ನಿಯಂತ್ರಿಸಿದರು. ಪರಿಣಾಮವಾಗಿ ಈಗ ಜಲಾಶಯ ಪುನಃ ಭರ್ತಿಯಾಗಿದೆ.
ಇದೀಗ ತುಂಗಭದ್ರಾ ಅಣೆಕಟ್ಟು ಮತ್ತೆ ಮೈ ತುಂಬಿಕೊಳ್ಳುತ್ತದೆ. ಆಗ ನಾನೇ ಬಂದು ಬಾಗಿನ ಅರ್ಪಿಸುತ್ತೇನೆ ಎಂದು ಆಗಸ್ಟ್ 13 ರಂದು ಹೇಳಿದ್ದರು.ಅದೇ ರೀತಿ ಭಾಗಿನ ಅರ್ಪಿಸುವ ಮೂಲಕ ಮಾತಿನಂತೆ ಮುಖ್ಯಮಂತ್ರಿಗಳು ಮಾತು ಮತ್ತು ಆಶಯ ಈಡೇರಿದ ಸಂಭ್ರಮದ ಕ್ಷಣಕ್ಕೆ ಇಡೀ ರಾಜ್ಯ ಇಂದು ಸಾಕ್ಷಿಯಾಯಿತು.
ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್, ಸಚಿವರು ಹೊಸಪೇಟೆಯಲ್ಲಿರುವ ಡ್ಯಾಂಗೆ ಬಾಗಿನ ಅರ್ಪಿಸಿದರು. 2ನೇ ಬಾರಿಗೆ ತುಂಗಭದ್ರಾ ಡ್ಯಾಂಗೆ ಪೂರ್ಣ ಭರ್ತಿಯಾಗಿದ್ದು, ಕೃಷಿ ಚಟುವಟಿಕೆಗಳಿಗೆ ಅಗತ್ಯ ನೀರು ಸಿಗುವ ನಿರೀಕ್ಷೆ ರೈತರಲ್ಲಿದೆ. ಈ ಬಾರಿ ಉತ್ತಮ ಮಳೆಯಾದ ಕಾರಣ ಜುಲೈ ತಿಂಗಳ ಅಂತ್ಯದಲ್ಲಿಯೇ ತುಂಗಭದ್ರಾ ಡ್ಯಾಂ ಭರ್ತಿಯಾಗಿತ್ತು. ಆದರೆ ಆಗಸ್ಟ್ 10ರ ಶನಿವಾರ ರಾತ್ರಿ ಡ್ಯಾಂನ 19ನೇ ಕ್ರಸ್ಟ್ಗೇಟ್ ಚೈನ್ ಲಿಂಕ್ ಮುರಿದು ಹೋಗಿತ್ತು. ನೀರಿನ ಒತ್ತಡದ ಕಾರಣ ಗೇಟ್ ಬದಿಗೆ ಸರಿದಿತ್ತು. ಈ ಒಂದೇ ಗೇಟ್ನಿಂದ ಸುಮಾರು 35 ಸಾವಿರಕ್ಕೂ ಅಧಿಕ ಕ್ಯುಸೆಕ್ ನೀರು ನದಿಗೆ ವ್ಯರ್ಥವಾಗಿ ಹರಿದು ಹೋಗಿತ್ತು.
ವೆಬ್ ಡೆಸ್ಕ್
ಫೋಕಸ್ ಕರ್ನಾಟಕ
ನಿಮ್ಮ ಪ್ರತಿಕ್ರಿಯೆ ಏನು?






