Union budget 2025: ಈ ಬಾರಿಯ ಬಜೆಟ್’ನಿಂದ ಕನ್ನಡಿಗರು ನಿರೀಕ್ಷಿಸಬಹುದಾದ 7 ಪ್ರಮುಖ ವಿಷಯಗಳಿವು!

ಬೆಂಗಳೂರು: ಸಾಕಷ್ಟು ನಿರೀಕ್ಷೆ, ಅಪೇಕ್ಷೆಗಳನ್ನು ಹೊಂದಿರುವ ಕೇಂದ್ರ ಬಜೆಟ್ ಅನ್ನು ಫೆಬ್ರುವರಿ 1ರಂದು ಮಂಡನೆ ಮಾಡಲಾಗುತ್ತಿದೆ. ಇಂದು ಅಂದರೆ ಫೆಬ್ರುವರಿ 1, ಶನಿವಾರ ಬೆಳಗ್ಗೆ 11 ಗಂಟೆಗೆ ನಿರ್ಮಲಾ ಸೀತಾರಾಮನ್ ಅವರಿಂದ ಸಂಸತ್ತಿನಲ್ಲಿ ಬಜೆಟ್ ಮಂಡನೆ ಆರಂಭವಾಗುತ್ತದೆ. 2024ರ ಬಜೆಟ್ನಲ್ಲಿ ಅವರ ಭಾಷಣ ಸುದೀರ್ಘದ್ದಾಗಿತ್ತು. ಈ ಬಾರಿಯದ್ದು ಅವರಿಗೆ ಎಂಟನೇ ಬಜೆಟ್ ಆಗಿದೆ.
ಇದರಲ್ಲಿ ಎರಡು ಮಧ್ಯಂತರ ಬಜೆಟ್ ಕೂಡ ಸೇರಿವೆ. ಬೆಂಗಳೂರು ಅಭಿವೃದ್ಧಿ, ವಿವಿಧ ಬೇಡಿಕೆಗಳ ನಿರೀಕ್ಷೆಯಲ್ಲಿ ಇಡೀ ಕರ್ನಾಟಕ ಇದೆ. ಹಲವು ಯೋಜನೆಗಳಿಗೆ ಅನುದಾನ ನೀಡುವಂತೆ ರಾಜ್ಯ ಸರ್ಕಾರ ಈಗಾಗಲೇ ಬೇಡಿಕೆಯನ್ನಿಟ್ಟಿದೆ. ಬರೋಬ್ಬರಿ 90,000 ಕೋಟಿ ವೆಚ್ಚದ ಯೋಜನೆಗಳಿಗೆ ನೆರವು ನೀಡುವಂತೆ ರಾಜ್ಯ ಸರ್ಕಾರ ಬೇಡಿಕೆಯನ್ನಿಟ್ಟಿದೆ. ಕೇಂದ್ರ ಹಣಕಾಸು ಇಲಾಖೆ ಯಾವೆಲ್ಲ ಬೇಡಿಕೆಗಳನ್ನು ಪೂರೈಸುತ್ತೆ ಅನ್ನೋದನ್ನು ಕಾದು ನೋಡಬೇಕಿದೆ.
ರಾಜ್ಯದಿಂದ ಮನವಿ ಏನು?
ಭದ್ರಾ ಮೇಲ್ದಂಡೆಗೆ ₹5,300 ಕೋಟಿ ಬಿಡುಗಡೆಗೆ ಅನುದಾನದ ಮನವಿ
ಬರಪೀಡಿತ ಮಧ್ಯ ಕರ್ನಾಟಕಕ್ಕೆ ನೀರು ಒದಗಿಸಲು ಭದ್ರಾ ಯೋಜನೆ
ಮೇಕೆದಾಟು, ಮಹದಾಯಿ ಯೋಜನೆಗಳಿಗೆ ಅನುಮೋದನೆಗೆ ಮನವಿ
ಕ.ಕರ್ನಾಟಕದ ಅಭಿವೃದ್ಧಿಗಾಗಿ 5 ಸಾವಿರ ಕೋಟಿ ಅನುದಾನಕ್ಕೆ ಮನವಿ
ಪರಿಸರ ಸೂಕ್ಷ್ಮ ಪಶ್ಚಿಮಘಟ್ಟ ಪ್ರದೇಶಕ್ಕೆ 10 ಸಾವಿರ ಕೋಟಿ ಅನುದಾನ
ಬೆಂಗಳೂರು, ಹುಬ್ಬಳ್ಳಿ ಮತ್ತು ಮೈಸೂರು ನಗರಗಳ ಅಭಿವೃದ್ಧಿ ಯೋಜನೆ
ಮೂಲಸೌಕರ್ಯ ಅಭಿವೃದ್ಧಿಗಾಗಿ ಸಮಗ್ರ ಯೋಜನೆ ಘೋಷಿಸಲು ಮನವಿ
ನಿಮ್ಮ ಪ್ರತಿಕ್ರಿಯೆ ಏನು?






