Virat Kohli: ವಿರಾಟ್ ಕೊಹ್ಲಿಗೆ BBMP ಶಾಕ್! ಬಿಲ್ಡಿಂಗ್ ಡೆಮಾಲಿಷ್ ಆಗುತ್ತಾ..! ಕಮಿಷನರ್ ಹೇಳಿದ್ದೇನು..?

ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಇರುವ ಸ್ಟಾರ್ ಕ್ರಿಕೆಟರ್ ವಿರಾಟ್ ಕೊಹ್ಲಿ ಸಹಮಾಲೀಕತ್ವದ ಒನ್ 8 ಕಮ್ಯೂನ್ ಬಾರ್ ಆ್ಯಂಡ್ ರೆಸ್ಟೋರೆಂಟ್ಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಬಿಸಿ ಮುಟ್ಟಿಸಿದೆ. ಒನ್ 8 ಕಮ್ಯೂನ್ ಬಾರ್ ಆ್ಯಂಡ್ ರೆಸ್ಟೋರೆಂಟ್ ನಲ್ಲಿ ಅಗ್ನಿ ಸುರಕ್ಷತೆ ಅಳವಡಿಸಿಲ್ಲ ಮತ್ತು ಅಗ್ನಿಶಾಮಕ ದಳದ ಪ್ರಮಾಣ ಪತ್ರ ಪಡೆಯದೇ ಕಾನೂನು ಉಲ್ಲಂಘನೆ ಮಾಡಿದ್ದಕ್ಕೆ ನೋಟಿಸ್ ನೀಡಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ಬಾರ್ ಆ್ಯಂಡ್ ರೆಸ್ಟೋರೆಂಟ್ಗಳಲ್ಲಿ ಕಾನೂನು ನಿಯಮ ಉಲ್ಲಂ ಸಿರುವುದಕ್ಕೆ ನೋಟಿಸ್ ನೀಡುವ ವೇಳೆ ಇದು ಯಾರ ಮಾಲಿಕತ್ವದಲ್ಲಿದೆ ಎಂಬುದನ್ನು ನಾವು ನೋಡುವುದಿಲ್ಲ. ನಮ್ಮ ಖಾತೆಯಲ್ಲಿ ಅಥವಾ ಯಾರ ಹೆಸರಿನಲ್ಲಿ ಪರವಾನಗಿ ನೀಡಲಾಗಿದೆ ಎಂಬುದನ್ನು ನೋಡಿಕೊಂಡು ಆ ಪ್ರಕಾರ ನೋಟಿಸ್ ಕೊಡಲಾಗುತ್ತದೆ.
ಎಂ.ಜಿ. ರಸ್ತೆಯ ಮಹಾತ್ಮಗಾಂಧಿ ಪ್ರತಿಮೆ ಎದುರುಗಡೆ ಕಟ್ಟಡವೊಂದರ ಮೇಲೆ ರೆಸ್ಟೋರೆಂಟ್ ನಡೆಯುತ್ತಿದೆ. ಕಟ್ಟಡದಲ್ಲಿ ನಿಯಮ ಉಲ್ಲಂ ಸಿದ್ದಕ್ಕೆ ನೋಟಿಸ್ ಕೊಡಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ಅಪೀಲ್ಗಾಗಿ ನಮ್ಮ ಬಳಿ ಬಂದಿದ್ದಾರೆ.
ಆ ಅಪೀಲ್ಗೆ ಸ್ಟೇ ಇದೆ ಎಂದು ತಿಳಿದು ಬಂದಿದೆ. ನಮ್ಮ ಬಳಿ ಅಪೀಲ್ ಇದ್ದರೆ, ಎಲ್ಲರಿಗೂ ಅನ್ವಯವಾಗುವಂತೆ ಅಪೀಲ್ನಲ್ಲಿ ಆರ್ಡರ್ ಪಾಸ್ ಮಾಡುತ್ತೇವೆ. ಅಪೀಲ್ ವಿಚಾರಣೆ ನಡೆದ ಬಳಿಕ ನಾವು ಅಂತಿಮ ಆದೇಶ ನೀಡಲಾಗುವುದು. ಒಂದು ವೇಳೆ ಅಪೀಲ್ ರದ್ದುಪಡಿಸಿದರೆ ಸಂಬಂಧಿಸಿದ ಕಟ್ಟಡ ಒಡೆಯಲು ಕ್ರಮ ಕೈಗೊಳ್ಳಬೇಕು ಎಂದು ಹೇಳಿದ್ದಾರೆ.
ವಿರಾಟ್ ಕೊಹ್ಲಿ ಅವರ ಸಹ ಮಾಲೀಕತ್ವದ ಬೆಂಗಳೂರಿನ ಒನ್ 8 ಕಮ್ಯೂನ್ ಬಾರ್ ಆ್ಯಂಡ್ ರೆಸ್ಟೋರೆಂಟ್ಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಅಗ್ನಿ ಸುರಕ್ಷತಾ ನಿಯಮ ಉಲ್ಲಂಘನೆಗಾಗಿ ನೋಟಿಸ್ ಜಾರಿಗೊಳಿಸಿದೆ. ಸಾಮಾಜಿಕ ಕಾರ್ಯಕರ್ತರ ದೂರಿನ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುನರಾವರ್ತಿತ ಉಲ್ಲಂಘನೆಗೆ ಏಳು ದಿನಗಳೊಳಗೆ ಸಮರ್ಪಕ ಉತ್ತರ ನೀಡದಿದ್ದರೆ ಕಾನೂನು ಕ್ರಮ ಎಂದು ಬಿಬಿಎಂಪಿ ಎಚ್ಚರಿಸಿದೆ.
ನಿಮ್ಮ ಪ್ರತಿಕ್ರಿಯೆ ಏನು?






