Yadgir Crime: ಹಾಡಹಗಲೇ ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಕೊಲೆ!

ಮಾರ್ಚ್ 16, 2025 - 12:21
 0  24
Yadgir Crime: ಹಾಡಹಗಲೇ ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಕೊಲೆ!

ಯಾದಗಿರಿ: ಹಾಡುಹಗಲೇ ಮಾರಕಾಸ್ತ್ರಗಳಿಂದ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಸಾದ್ಯಾಪುರ ಗ್ರಾಮದ ಬಳಿ ನಡೆದಿದೆ. ಮಾಪಣ್ಣ(52) ಕೊಲೆಯಾದ ದುರ್ದೈವಿಯಾಗಿದ್ದು, ಬೆಳಿಗ್ಗೆ 8 ಗಂಟೆ ಸುಮಾರಿಗೆ ಬೈಕ್ ಮೇಲೆ ಶಹಾಪುರಕ್ಕೆ ಬಂದಿದ್ದರು.

ಈ ವೇಳೆ ಶಹಾಪುರದಿಂದ ಸ್ವಗ್ರಾಮ ಮದ್ದರಕಿಗೆ ತೆರಳುವಾಗ ಮಾರ್ಗ ಮಧ್ಯೆ ಸಾದ್ಯಾಪುರ ಬಳಿ ಬೈಕ್ ಅಡ್ಡಗಟ್ಟಿ ಮಾಪ್ಪಣ್ಣನನ್ನು ಕೊಲೆ ಮಾಡಿದ್ರು. ತಲೆ, ಬೆನ್ನು, ಎಡಗೈಗೆ ಚಾಕುವಿನಿಂದ ಚುಚ್ಚಿ ಕೊಲೆ ಮಾಡಲಾಗಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಶಹಾಪುರ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ, ಭೀಮರಾಯನಗುಡಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow