Yadgiri PSI Sucide Case; ಶಾಸಕ ಚನ್ನಾರೆಡ್ಡಿ ವಿರುದ್ಧ ಕ್ರಮ ಕೈಗೊಳ್ಳದ ಪೊಲೀಸರು.!

ಯಾದಗಿರಿ ಪಿಎಸ್ಐ ಪರಶುರಾಮ (PSI Parashuram) ಅನುಮಾನಸ್ಪದವಾಗಿ ಮೃತಪಟ್ಟು ಒಂದು ವಾರ ಕಳೆದಿದೆ. ಈ ಪ್ರಕರಣ ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದೆ. ಆಡಳಿತಾರೂಢ ಕಾಂಗ್ರೆಸ್ ಮತ್ತು ವಿಪಕ್ಷಗಳ ನಡುವೆ ವಾಕ್ಸಮರಕ್ಕೆ ಕಾರಣವಾಗಿದೆ. ಪ್ರಕರಣದ ತನಿಖೆಯನ್ನು ಸಿಐಡಿ ನಡೆಸುತ್ತಿದೆ. ಪಿಎಸ್ಐ ಪರಶುರಾಮ ಅವರ ಸಾವಿಗೆ ಯಾದಗಿರಿ ಕಾಂಗ್ರೆಸ್ ಶಾಸಕ ಚೆನ್ನರೆಡ್ಡಿ ಮತ್ತು ಪುತ್ರ ಪಂಪನಗೌಡ ಕಾರಣ ಎಂದು ಕುಟುಂಬಸ್ಥರು ಆರೋಪ ಮಾಡಿದ್ದಾರೆ. ಈ ಕೇಸ್ಗೆ ಸಂಬಂಧಿಸಿದಂತೆ ಶಾಸಕ ಚೆನ್ನಾರೆಡ್ಡಿ ಮತ್ತು ಪುತ್ರ ಪಂಪಾಗೌಡ ವಿರುದ್ಧ ಜಾತಿ ನಿಂದನೆ ದೂರು ದಾಖಲಾಗಿದೆ. ಪ್ರಕರಣದಲ್ಲಿ ಶಾಸಕ ಚೆನ್ನಾರೆಡ್ಡಿ ಎ1 ಆಗಿದ್ದಾರೆ.
ಪಿಎಸ್ಐ ಪರಶುರಾಮ ಅನುಮಾನಾಸ್ಪದ ಸಾವು ಪ್ರಕರಣ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದ್ದಂತೆಯೇ ಮತ್ತು ತಮ್ಮ ವಿರುದ್ಧ ಗಂಭೀರ ಆರೋಪ ಕೇಳಿಬರುತ್ತಿದ್ದಂತೆಯೇ ಶಾಸಕ ಚೆನ್ನಾರೆಡ್ಡಿ ಮತ್ತು ಪುತ್ರ ಪಂಪನಗೌಡ ನಾಪತ್ತೆಯಾಗಿದ್ದರು. ಅವರು ಈಗ ಎಲ್ಲಿದ್ದಾರೆ? ಶಾಸಕ ಚೆನ್ನಾರೆಡ್ಡಿ ವಿರುದ್ಧ ಜಾತಿನಿಂದನೆ ದೂರು ದಾಖಲಾಗಿದ್ದರೂ ಪೊಲೀಸರು ಇನ್ನೂವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲವೇಕೆ ಎಂಬ ಪ್ರಶ್ನೆಗಳು ಉದ್ಭವಿಸಿವೆ.
ಪಿಎಸ್ಐ ಪರಶುರಾಮ ಅನುಮಾನಸ್ಪದ ಸಾವು ಚರ್ಚೆಗೀಡಾಗುತ್ತಿದ್ದಂತೆಯೇ ಪರಶುರಾಮ ಪತ್ನಿ ಶ್ವೇತಾ, ಪತಿಯ ಸಾವಿಗೆ ಶಾಸಕ ಚೆನ್ನಾರೆಡ್ಡಿ ಮತ್ತು ಅವರ ಪುತ್ರ ಪಂಪನಗೌಡ ಕಾರಣ ಎಂದು ಆರೋಪಿಸಿದ್ದರು. ದೂರು ದಾಖಲಿಸಿಕೊಳ್ಳಲು ಯಾದಗಿರಿ ಪೊಲೀಸರು ಹಿಂದೇಟು ಹಾಕುತ್ತಿದ್ದಾರೆ ಎಂದು ಆರೋಪಿಸಿದ್ದರು. ಇದು ಸರ್ಕಾರವನ್ನು ಒತ್ತಡಕ್ಕೆ ಒಳಗಾಗುವಂತೆ ಮಾಡಿತು. ಕೊನೆಗೆ ಯಾದಗಿರಿ ನಗರ ಪೊಲೀಸ್ ಠಾಣೆಯಲ್ಲಿ ಶಾಸಕ ಚೆನ್ನಾರೆಡ್ಡಿ ಮತ್ತು ಪಂಪನಗೌಡ ವಿರುದ್ಧ ದೂರು ದಾಖಲಾಯ್ತು. ಇತ್ತ ದೂರು ದಾಖಲಾಗುತ್ತಿದ್ದಂತೆ ಶಾಸಕ ಚೆನ್ನಾರೆಡ್ಡಿ ಮತ್ತು ಪಂಪನಗೌಡ ಯಾದಗಿರಿಯಿಂದ ಕಾಲ್ಕಿತ್ತಿದ್ದು, ದೆಹಲಿಗೆ ತೆರಳಿದ್ದಾರೆ ಎಂಬ ವಂದತಿ ಹಬ್ಬಿತ್ತು.
ಪಿಎಸ್ಐ ಪರಶುರಾಮ ಯಾದಗಿರಿ ನಗರ ಠಾಣೆಗೆ ವರ್ಗಾವಣೆಯಾಗಿ ಒಂದು ವರ್ಷ ಕಳೆದಿರಲಿಲ್ಲ. ಏಳು ತಿಂಗಳಲ್ಲಿ ಮತ್ತೆ ಯಾದಗಿರಿ ಸೈಬರ್ ಕ್ರೈಂ ಠಾಣೆಗೆ ವರ್ಗಾವಣೆಯಾಗಿದ್ದರು. ಯಾದಗಿರಿ ನಗರ ಪೊಲೀಸ್ ಠಾಣೆಯಲ್ಲೇ ಮುಂದುವರೆಸಲು ಶಾಸಕ ಚೆನ್ನಾರೆಡ್ಡಿ 30 ಲಕ್ಷ ರೂ. ಬೆಡಿಕೆ ಇಟ್ಟಿದ್ದರು. ಇದರಿಂದ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದ ಪಿಎಸ್ಐ ಶುಕ್ರವಾರ (ಆಗಸ್ಟ್.02) ಮಧ್ಯಾಹನ್ನ ವಸತಿ ಗೃಹದಲ್ಲಿ ಮಲಗಿದ್ದಲ್ಲೇ ಮೃತಪಟ್ಟಿದ್ದಾರೆ. ಮೂಗಿನಲ್ಲಿ ಹಾಗೂ ಬಾಯಯಲ್ಲಿ ರಕ್ತ ಬಂದಿತ್ತು. ಈ ಸಾವಿಗೆ ಶಾಸಕ ಚೆನ್ನಾರೆಡ್ಡಿ ಮತ್ತು ಪಂಪನಗೌಡ ಕಾರಣ. ಶಾಸಕ ಚೆನ್ನಾರೆಡ್ಡಿ ನಮಗೆ ಜಾತಿ ನಿಂದನೆ ಮಾಡಿದ್ದಾರೆ ಎಂದು ಪರಶುರಾಮ ಪತ್ನಿ ಶ್ವೇತಾ ಆರೋಪಿಸಿದ್ದಾರೆ.
ವೆಬ್ ಡೆಸ್ಕ್
ಫೋಕಸ್ ಕರ್ನಾಟಕ
ನಿಮ್ಮ ಪ್ರತಿಕ್ರಿಯೆ ಏನು?






