ಅಂದು ಜೋಡಿ, ಇಂದು ವೈರಿ: ಸಂಕ್ರಾಂತಿ ದಿನವೇ ತ್ರಿವಿಕ್ರಮ್- ಭವ್ಯ ನಡುವೆ ಟಾಕ್ ಫೈಟ್!

ಬಿಗ್ ಬಾಸ್ ಕನ್ನಡ ಸೀಜನ್ 11 ಈಗ ಅಂತಿಮ ದಿನಗಳ ಲೆಕ್ಕಾಚಾರದಲ್ಲಿದ್ದು, ಸ್ಪರ್ಧಿಗಳು ಮಾಡು ಇಲ್ಲವೇ ಮಡಿ ಪರಿಸ್ಥಿತಿಯಲ್ಲಿದ್ದಾರೆ. ಕಳೆದ ವಾರ ಟಿಕೆಟ್ ಟು ಫಿನಾಲೆಗಾಗಿ ಜಿದ್ದಾಜಿದ್ದಿಯ ಹೋರಾಟ ನಡೆಸಿದ್ದ ಸ್ಪರ್ಧಿಗಳು ಈ ವಾರ ನಾಮಿನೇಷನ್ನಿಂದ ಪಾರಾಗಲು ಹೋರಾಡುತ್ತಿದ್ದಾರೆ. ಈ ವಾರ ಬಿಗ್ ಬಾಸ್ ಕನ್ನಡ ಸೀಜನ್ 11ರಲ್ಲಿ ಒಂದೇ ವಾರದಲ್ಲಿ ಎರಡು ಎಲಿಮಿನೇಷನ್ಗಳು ನಡೆಯಲಿದೆ. ವಾರದ ಮಧ್ಯವೇ ಎಲಿಮಿನೇಷನ್ ನಡೆಯಲಿದ್ದು, ವೀಕೆಂಡ್ ಸಂಚಿಕೆಗೂ ಮುನ್ನ ಒಬ್ಬರು ಮನೆಗೆ ಹೋಗುವಂತೂ ಗ್ಯಾರಂಟಿಯಾಗಿದೆ
ಹೀಗಾಗಿ ಬಿಗ್ ಬಾಸ್ ನಲ್ಲಿ ಈ ವಾರದ ಪ್ರತಿಯೊಂದು ಟಾಸ್ಕ್ ಕೂಡ ಹೆಚ್ಚು ಮಹತ್ವ ಪಡೆದಿರುತ್ತದೆ. ಸ್ಪರ್ಧಿಗಳು ಕೂಡ ಗೆಲ್ಲಲು ಸಾಕಷ್ಟು ಪೈಪೋಟಿ ನಡೆಸುತ್ತಿದ್ದಾರೆ. ಇದರ ನಡುವೆ ಭವ್ಯ ಹಾಗೂ ತ್ರಿವಿಕ್ರಮ್ ಮಧ್ಯೆ ಮಾತಿನ ಸಮರ ನಡೆದಿದೆ.
ಸ್ಪರ್ಧಿಗಳು ತಮ್ಮನ್ನು ತಾವು ಕಾಪಾಡಿಕೊಳ್ಳಲು ಬಿಗ್ಬಾಸ್ನಲ್ಲಿ ಇನ್ನೊಬ್ಬರ ಮೇಲೆ ದೂರಬೇಕಾದ ಅನಿವಾರ್ಯ ಎದುರಾಗಿದೆ. ಇಷ್ಟು ದಿನ ಜೋಡಿ ಜೋಡಿಯಾಗಿ ಕಾಣಿಸಿಕೊಳ್ಳುತ್ತಿದ್ದ ತ್ರಿವಿಕ್ರಮ್ ಹಾಗೂ ಭವ್ಯ ನಡುವೆ ಬಿರುಕು ಮೂಡಿದೆ. ಯಾರು ಯಾರನ್ನ ಹಿಂದಿಕ್ಕಿ ಮುಂದೆ ಹೋಗಲು ಪ್ರಯತ್ನ ಮಾಡುತ್ತಿದ್ದಾರೆ ಎಂಬುದರ ಕುರಿತು ಇಬ್ಬರ ನಡುವೆ ಬಿರುಸಿನ ಚರ್ಚೆ ನಡೆದಿದೆ.
105 ದಿನದಿಂದ ಇರದಿರುವ ಬಾಂಡಿಂಗ್ ಈಗ ಇನ್ನೊಬ್ಬರ ಜೊತೆ ಸೇರಿಕೊಂಡು ಆಚೆ ಇಡುತ್ತಿದ್ದೀಯ. ತುಂಬಾ ಬಂಡವಾಳಗಳು ಗೊತ್ತಾದಾಗ ಯಾರು ಏನು ಮಾಡೋಕೆ ಆಗಲ್ಲ ಎಂದು ತ್ರಿವಿಕ್ರಮ್ ಹೇಳಿದ್ದಾರೆ. ಇದಕ್ಕೆ ಉತ್ತರಿಸಿರುವ ಭವ್ಯಗೌಡ, ನೀನು ಏನೇನೋ ತಲೆಗೆ ಹಾಕ್ಕೊಂಡು ಮಾತನಾಡಬೇಡ. ನೀವೇ ಹಾಳಾಗುತ್ತಿದ್ದೀರಾ ಅಷ್ಟೇ. ಈ ವೇಳೆ
ತ್ರಿವಿಕ್ರಮ್, ನೀನೇನೂ ನನಗೆ ಹೇಳುವುದು?, ಇಷ್ಟೆಲ್ಲಾ ಪುಂಗೋ ಅವಶ್ಯಕತೆ ಇಲ್ಲ. ಫಸ್ಟ್ ಡೇ ಇದ್ದಾಗೆ ಈಗ ನೀನಿಲ್ಲ ಎಂದು ಭವ್ಯಗೆ ನೇರವಾಗಿಯೇ ಹೇಳದ್ದಾರೆ.
ತ್ರಿವಿಕ್ರಮ್ ಹಾಗೂ ಭವ್ಯ ಇಬ್ಬರು ಸೋಫಾ ಮೇಲೆ ಕುಳಿತು ಈ ರೀತಿಯಾಗಿ ಮಾತನಾಡಿದ್ದಾರೆ. ಇದರಿಂದ ಬೇಸರ ಮಾಡಿಕೊಂಡ ಭವ್ಯ ಎದ್ದು ಹೋಗಿದ್ದಾರೆ. ಸದ್ಯ ಇಬ್ಬರ ನಡುವಿನ ಸ್ನೇಹ, ಪ್ರೀತಿ ಈಗ ಇಲ್ಲ ಎಂದು ಅನಿಸುತ್ತಿದೆ. ಟ್ರೋಫಿ ಗೆಲ್ಲುವ ಉದ್ದೇಶದಿಂದ ಹೀಗೆ ಒಬ್ಬರನೊಬ್ಬರು ದೂರ ಮಾಡಿಕೊಳ್ಳುತ್ತಿದ್ದಾರಾ ಎನ್ನುವ ಪ್ರಶ್ನೆ ಮೂಡಿದೆ. ಟಾಸ್ಕ್ಗಳಂತೂ ಇಬ್ಬರು ಎಚ್ಚರವಾಗಿಯೇ ಆಡಬೇಕಿದೆ.
ಬಿಗ್ಬಾಸ್ ಕನ್ನಡ ಸೀಸನ್ 11 ಕೆಲವೇ ದಿನಗಳಲ್ಲಿ ಮುಗಿಯಲಿದ್ದು, ಈ ಬಾರಿ ಯಾರಿಗೆ ವಿನ್ನರ್ ಕಿರೀಟ ದೊರಕಲಿದೆ ಎಂಬ ಕುತೂಹಲ ಕಿರುತೆರೆ ಪ್ರೇಕ್ಷಕರಲ್ಲಿದೆ.
ನಿಮ್ಮ ಪ್ರತಿಕ್ರಿಯೆ ಏನು?






