ಅಕ್ರಮ ಆಸ್ತಿ ಗಳಿಕೆ ಕೇಸ್ʼನಲ್ಲಿ ಜಮೀರ್ಗೆ ನೋಟಿಸ್: ಡಿ.3ರಂದು ವಿಚಾರಣೆಗೆ ಹಾಜರಾಗುವಂತೆ ಸೂಚನೆ

ಬೆಂಗಳೂರು: ಜಮೀರ್ ಅಹಮ್ಮದ್ ಖಾನ್ ಇದೀಗ ಸಂಕಷ್ಟ ಎದುರಾಗಿದೆ. ಹೌದು ಅಕ್ರಮ ಆಸ್ತಿ ಗಳಿಕೆ ಪ್ರಕರಣ ಸಂಬಂಧ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಅವರಿಗೆ ವಿಚಾರಣೆಗೆ ಡಿಸೆಂಬರ್ 3 ರಂದು ಖುದ್ದು ಹಾಜರಾಗುವಂತೆ ಲೋಕಾಯುಕ್ತ ಪೊಲೀಸರು ನೊಟೀಸ್ ನೀಡಿದ್ದಾರೆ.
ಬೆಂಗಳೂರಿನ ಚಾಮರಾಜಪೇಟೆ ಬಳಿ ಇರುವ ತಮ್ಮ ಮನೆಗೆ ಬಂದು ಲೋಕಾಯುಕ್ತ ಇನ್ಪೆಕ್ಟರ್ ಸಚಿವರಿಗೆ ನೊಟೀಸ್ ನೀಡಿದ್ದು, ಸೂಕ್ತ ದಾಖಲೆಗಳೊಂದಿಗೆ ಖುದ್ದು ಹಾಜರಾಗುವಂತೆ ಸೂಚಿಸಿದ್ದಾರೆ. ಮೂರು ವರ್ಷಗಳ ಹಿಂದೆ ಜಮೀರ್ ವಿರುದ್ಧ ಎಸಿಬಿಯಲ್ಲಿ ಜಾರಿ ನಿರ್ದೇಶನಾಲಯದ ವರದಿ ಆಧರಿಸಿ ಅಕ್ರಮ ಆಸ್ತಿ ಸಂಪಾದನೆ ಪ್ರಕರಣ ದಾಖಲಾಗಿತ್ತು.
ಎಸಿಬಿ ರದ್ದುಗೊಂಡ ನಂತರ ಆ ಪ್ರಕರಣದ ಮುಂದುವರೆದ ತನಿಖೆಯನ್ನು ಲೋಕಾಯುಕ್ತ ಪೊಲೀಸರು ಕೈಗೆತ್ತಿಕೊಂಡಿದ್ದರು. ಪ್ರಾಥಮಿಕ ಹಂತದ ತನಿಖೆ ಮುಗಿಸಿದ ಪೊಲೀಸರು, ಈಗ ಅಕ್ರಮ ಆಸ್ತಿ ಸಂಪಾದನೆ ಸಂಬಂಧ ವಿಚಾರಣೆಗೆ ಹಾಜರಾಗಲು ಸಚಿವರಿಗೆ ನೋಟಿಸ್ ಜಾರಿಗೊಳಿಸಿದ್ದಾರೆ.
ನಿಮ್ಮ ಪ್ರತಿಕ್ರಿಯೆ ಏನು?






