ಅತ್ತಿಗೆ ಮೈದುನನ ಲವ್ವಿ ಡವ್ವಿ! ಅಡ್ಡಿಯಾಗಿದ್ದ ಸ್ವಂತ ಅಣ್ಣನನ್ನೇ ಕೊಂದನಾ ತಮ್ಮ..!?

ಅತ್ತಿಗೆ ಅಂದ್ರೆ ತಾಯಿ ಸಮಾನ ಅಂತಾರೆ. ಹೀಗಾಗಿ ಅತ್ತಿಗೆಗೆ ಯಾವಾಗಲೂ ತಾಯಿಯ ಸ್ಥಾನಮಾನವನ್ನು ನೀಡಲಾಗುತ್ತದೆ. ಅದಕ್ಕಾಗಿಯೇ ಅವರ ಬಗ್ಗೆ ಯಾವಾಗಲೂ ಗೌರವದ ಭಾವನೆ ಇರಬೇಕು. ಆದ್ರೆ, ಅತ್ತಿಗೆಯೊಂದಿಗೆ ಸ್ವತಃ ಮೈದುನನೇ ಅಕ್ರಮ ಸಂಬಂಧವನ್ನು ಹೊಂದಿದ್ದು, ಇದಕ್ಕೆ ಅಡ್ಡಿಯಾಗಿದ್ದ ಅತ್ತಿಗೆಯ ಗಂಡ ಅಂದರೆ ಸ್ವಂತ ಅಣ್ಣನನ್ನೆ ಕೊಲೆ ಮಾಡಿದ್ದಾನೆ. ಕೊಲೆಯನ್ನು ಸಹಜ ಸಾವು ಎಂದು ಬಿಂಬಿಸಲು ಮುಂದಾಗಿದ್ದು, ಮರಣೋತ್ತರ ಪರೀಕ್ಷೆಯಿಂದ ಕೊಲೆ ಎಂಬುದು ಸಾಬೀತಾಗಿದ್ದು, ಆರೋಪಿಯನ್ನ ಬಂಧಿಸಿ ಪೊಲೀಸರು ಜೈಲಿಗಟ್ಟಿದ್ದಾರೆ.
ಉತ್ತರ ಪ್ರದೇಶದ ಮಹೋಬಾ ಜಿಲ್ಲೆಯ ಕುಲ್ಪಹಾಡ್ ಠಾಣಾ ಕ್ಷೇತ್ರದ ಇಂದೋರ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಇಲ್ಲಿ ದುರ್ಜನ್ಲಾಲ್ ಅಹಿರ್ವಾರ್ ಅವರ ಮಗ ಪರಮಲಾಲ್ ಅಹಿರ್ವಾರ್ (40) ಅವರನ್ನು ಗಂಭೀರ ಸ್ಥಿತಿಯಲ್ಲಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ವೈದ್ಯರು ಅವರನ್ನು ಈತ ಸಾವನ್ನಪ್ಪಿದ್ದಾನೆ ಎಂದು ಘೋಷಿಸಿದರು. ಆದರೆ, ಮೃತರ ಮಗ ಪೊಲೀಸರಿಗೆ ನೀಡಿದ ದೂರಿನಲ್ಲಿ ತನ್ನ ಚಿಕ್ಕಪ್ಪ ಖೇಮಚಂದ್ರ ಅಹಿರ್ವಾರ್ ತನ್ನ ತಂದೆಗೆ ಮದ್ಯದಲ್ಲಿ ವಿಷ ಬೆರೆಸಿ ಕುಡಿಸಿದ್ದರಿಂದ ಅವರ ಸಾವು ಸಂಭವಿಸಿದೆ ಎಂದು ಆರೋಪಿಸಿದ್ದಾನೆ.
ತನ್ನ ತಂದೆಯ ಸಾವಿನ ಪ್ರಕರಣದ ತನಿಖೆ ಮತ್ತು ಕ್ರಮ ಕೈಗೊಳ್ಳುವಂತೆ ಮಗ ಮನವಿ ಮಾಡಿದ್ದಾನೆ. ಪೊಲೀಸರು ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಇನ್ನು ತನಿಖಾ ವರದಿಯ ಬಗ್ಗೆ ಮಾಹಿತಿ ನೀಡಿದ ಕುಲ್ಪಹಾಡ್ ಕ್ಷೇತ್ರಾಧಿಕಾರಿ ಹರ್ಷಿತಾ ಗಂಗವಾರ್ ಅವರು, ಮೃತರ ಪೋಸ್ಟ್ಮಾರ್ಟಮ್ ವರದಿಯಲ್ಲಿ ವಿಷಪ್ರಾಶನದಿಂದ ಸಾವು ಸಂಭವಿಸಿದೆ ಎಂದು ದೃಢಪಟ್ಟಿದೆ. ಇದರ ನಂತರ ಪೊಲೀಸರು ಸಾಕ್ಷಿಗಳ ಹೇಳಿಕೆಗಳು ಮತ್ತು ತನಿಖೆಯ ಆಧಾರದ ಮೇಲೆ ಆರೋಪಿ ಖೇಮಚಂದ್ರ ಅಹಿರ್ವಾರ್ನನ್ನು ಬಂಧಿಸಿದ್ದಾರೆ. ವಿಚಾರಣೆಯಲ್ಲಿ ಆರೋಪಿ ತನ್ನ ಅಪರಾಧವನ್ನು ಒಪ್ಪಿಕೊಂಡಿದ್ದಾನೆ.
ಅತ್ತಿಗೆಯೊಂದಿಗಿನ ಅಕ್ರಮ ಸಂಬಂಧಕ್ಕೆ ಕೊಲೆ: ಇನ್ನು ಪೊಲೀಸರ ವಿಚಾರಣೆಯನ್ನು ಮೃತನ ಸಹೋದರ ಆರೋಪಿ ಖೇಮಚಂದ್ರ ಅಹಿರ್ವಾರ್ ತನ್ನ ಅತ್ತಿಗೆಯೊಂದಿಗೆ ಅಕ್ರಮ ಸಂಬಂಧವನ್ನು ಹೊಂದಿದ್ದಾಗಿ ತಿಳಿಸಿದ್ದಾನೆ. ಆದರೆ, ಆತ ತನ್ನ ಮತ್ತು ಅತ್ತಿಗೆ ಸಂಬಂಧಕ್ಕೆ ಅಣ್ಣನೇ ಅಡ್ಡಿಯಾಗಿದ್ದನು. ಈ ಕಾರಣಕ್ಕಾಗಿ ಅವನು ಸೇವನೆ ಮಾಡುತ್ತಿದ್ದ ಮದ್ಯದಲ್ಲಿ ವಿಷ ಬೆರೆಸಿ ಕೊಲ್ಲುವ ಸಂಚು ರೂಪಿಸಿ, ನಂತರ ಈತನಿಗೆ ಮದ್ಯದಲ್ಲಿ ವಿಷಬೆರೆಸಿ ಕೊಟ್ಟು ಈ ಕೃತ್ಯ ಎಸಗಲಾಗಿದೆ ಎಂದು ತಿಳಿಸಿದ್ದಾನೆ.
ನಿಮ್ಮ ಪ್ರತಿಕ್ರಿಯೆ ಏನು?






