ಅನ್ಯ ಧರ್ಮದ ಯುವತಿಯನ್ನ ಪ್ರೀತಿಸಿದಕ್ಕೆ ಹಿಂದೂ ಯುವಕನ ಭೀಕರ ಕೊಲೆ..!

ಆಗಸ್ಟ್ 4, 2025 - 10:42
 0  8
ಅನ್ಯ ಧರ್ಮದ ಯುವತಿಯನ್ನ ಪ್ರೀತಿಸಿದಕ್ಕೆ ಹಿಂದೂ ಯುವಕನ ಭೀಕರ ಕೊಲೆ..!

ಕೊಪ್ಪಳ: ಅನ್ಯ ಧರ್ಮದ ಯುವತಿಯ ಜೊತೆ ಪ್ರೀತಿಸುತ್ತಿದ್ದ ಕಾರಣಕ್ಕೆ, ಮುಸ್ಲಿಂ ಯುವಕನಿಂದ ಹಿಂದೂ ಯುವಕನ ಕೊಲೆಯಾಗಿರುವ ದಾರುಣ ಘಟನೆ ಕೊಪ್ಪಳ ನಗರದ ವಾರ್ಡ್ 3 ಮಸೀದಿ ಮುಂಭಾಗದಲ್ಲಿ ಭಾನುವಾರ ರಾತ್ರಿ ನಡೆದಿದೆ.

ಮೃತನನ್ನು ಗವಿಸಿದ್ದಪ್ಪ ನಾಯಕ್ ಎಂದು ಗುರುತಿಸಲಾಗಿದ್ದು, ಆರೋಪಿಯಾಗಿರುವ ಸಾದಿಕ್ ಕೋಲ್ಕಾರ್ ಎಂಬುವನು ಗವಿಸಿದ್ದಪ್ಪನ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಘಟನೆಯ ನಂತರ ಸಾದಿಕ್ ಸ್ವತಃ ಕೊಪ್ಪಳ ನಗರ ಪೊಲೀಸ್ ಠಾಣೆಗೆ ಹೋಗಿ ಶರಣಾಗಿದ್ದಾನೆ.

ಮೃತ ಗವಿಸಿದ್ದಪ್ಪನ ತಂದೆ ನಿಂಗಜ್ಜ ಟಣಕನಲ್ ಅವರು ಸಾದಿಕ್ ಸೇರಿದಂತೆ ನಾಲ್ವರ ವಿರುದ್ಧ ದೂರು ದಾಖಲಿಸಿದ್ದು, ಪೊಲೀಸರು ಭಾರತೀಯ ದಂಡ ಸಂಹಿತೆ (BNS) ಸೆಕ್ಷನ್ 103(1), 2023 ಕಲಂ 3(2)(v) ಮತ್ತು ಎಸ್ಸಿ/ಎಸ್ಟಿ (ಅತ್ಯಾಚಾರ ನಿರೋಧಕ) ಕಾಯ್ದೆ 1989 ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

 

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow