ಅವರು ಮುಸ್ಲಿಂರನ್ನು ಬೈಯ್ತಾರೆ, ಯತ್ನಾಳ್ʼರನ್ನ ಕಾಂಗ್ರೆಸ್ʼಗೆ ಸೇರಿಸಿಕೊಳ್ಳೋದು ಕಷ್ಟ: MB ಪಾಟೀಲ್!

ವಿಜಯಪುರ:- ಯತ್ನಾಳ್ ಅವರನ್ನು ನಮ್ಮಲ್ಲಿ ಸೇರಿಸಿಕೊಳ್ಳುವುದು ಕಷ್ಟ ಇದೆ ಎಂದು ಎಂ.ಬಿ ಪಾಟೀಲ್ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು, ಶಾಸಕ ಬಸನಗೌಡ ಪಾಟೀಲ್ ಅವರನ್ನ ಕಾಂಗ್ರೆಸ್ ಪಕ್ಷಕ್ಕೆ ಸೇರಿಸಿಕೊಳ್ಳುವುದು ಕಷ್ಟ ಸಾಧ್ಯ. ಯತ್ನಾಳ್ ಹೊಸ ಪಕ್ಷ ಕಟ್ಟುವ ವಿಚಾರಕ್ಕೆ ನಾನು ಏನು ಹೇಳಲ್ಲ. ಆದ್ರೆ ಅವರು ನಮ್ಮ ಪಕ್ಷಕ್ಕೆ ಯಾವುದೇ ಅರ್ಜಿ ಹಾಕಿಲ್ಲ. ಹಾಕಿದರು ಕೂಡ ನಮ್ಮಲ್ಲಿ ಅವರನ್ನು ಸೇರಿಸಿಕೊಳ್ಳುವುದು ಕಷ್ಟ ಇದೆ. ಅವರು ಒಂದು ಸಮಾಜದ ವಿರುದ್ಧ ಬಹಳಷ್ಟು ಮಾತನಾಡಿದ್ದಾರೆ. ಈ ಕಾರಣ ನಮ್ಮಲ್ಲಿ ಅವರನ್ನ ಸೇರಿಸಿಕೊಳ್ಳುವುದು ಕಷ್ಟ ಅಂತ ಸಚಿವರು ಹೇಳಿದ್ದಾರೆ.
ಇದೇ ವೇಳೆ ಸಚಿವ ರಾಜಣ್ಣ ಪುತ್ರನ ಹತ್ಯೆಗೆ ಸುಪಾರಿ ವಿಚಾರಕ್ಕೆ ಪ್ರತಿಕ್ರಿಯಿಸಿ, ಈ ಪ್ರಕರಣ ನೋಡಿಕೊಳ್ಳಲು ಗೃಹ ಸಚಿವರು, ಪೊಲೀಸರು ಇದ್ದಾರೆ. ಅವರು ಪ್ರಕರಣವನ್ನ ಬಯಲಿಗೆ ಎಳೆಯುತ್ತಾರೆ ಎಂದಿದ್ದಾರೆ.
ನಿಮ್ಮ ಪ್ರತಿಕ್ರಿಯೆ ಏನು?






