ಆಟ ಅರ್ಧಕ್ಕೆ ನಿಲ್ಲಿಸಿ ಜಸ್​ಪ್ರೀತ್ ಬುಮ್ರಾ ಮೈದಾನ ತೊರೆದಿದ್ದೇಕೆ? ಇಲ್ಲಿದೆ ಅಸಲಿ ಕಾರಣ?

ಜನವರಿ 4, 2025 - 22:02
ಜನವರಿ 4, 2025 - 17:17
 0  14
ಆಟ ಅರ್ಧಕ್ಕೆ ನಿಲ್ಲಿಸಿ ಜಸ್​ಪ್ರೀತ್ ಬುಮ್ರಾ ಮೈದಾನ ತೊರೆದಿದ್ದೇಕೆ? ಇಲ್ಲಿದೆ ಅಸಲಿ ಕಾರಣ?

ಸಿಡ್ನಿಯಲ್ಲಿ ನಡೆಯುತ್ತಿರುವ ಭಾರತ ಮತ್ತು ಆಸ್ಟ್ರೇಲಿಯಾ ನಡುವಣ 5ನೇ ಟೆಸ್ಟ್ ಪಂದ್ಯದ 2ನೇ ದಿನದಾಟದ ಮಧ್ಯೆದಲ್ಲಿ ಟೀಮ್ ಇಂಡಿಯಾ ನಾಯಕ ಜಸ್​ಪ್ರೀತ್ ಬುಮ್ರಾ ಮೈದಾನ ತೊರೆದಿದ್ದಾರೆ. ಬುಮ್ರಾ ಅನುಪಸ್ಥಿತಿಯಲ್ಲಿ ಭಾರತ ತಂಡದ ಹಂಗಾಮಿ ನಾಯಕನಾಗಿ ವಿರಾಟ್ ಕೊಹ್ಲಿ ಕಾಣಿಸಿಕೊಂಡಿದ್ದಾರೆ. 

ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ನಲ್ಲಿ ಜಸ್​ಪ್ರೀತ್ ಬುಮ್ರಾ ಅವರು ಆಟ ಅರ್ಧಕ್ಕೆ ನಿಲ್ಲಿಸಿ ಮೈದಾನ ತೊರೆದಿದ್ದಾರೆ. ಟೀಮ್ ಇಂಡಿಯಾ ನಾಯಕ ಜಸ್​ಪ್ರೀತ್ ಬುಮ್ರಾ ಆಸ್ಟ್ರೇಲಿಯಾ ವಿರುದ್ಧದ 5ನೇ ಟೆಸ್ಟ್ ಪಂದ್ಯದ ನಡುವೆ ಮೈದಾನ ತೊರೆದಿದ್ದರು. ಸಿಡ್ನಿಯಲ್ಲಿ ನಡೆಯುತ್ತಿರುವ ಈ ಪಂದ್ಯದ 2ನೇ ದಿನದಾಟದ ಭೋಜನಾ ವಿರಾಮದ ಬಳಿಕ ಬುಮ್ರಾ ದಿಢೀರ್ ಆಗಿ ಡ್ರೆಸ್ಸಿಂಗ್ ರೂಮ್​ಗೆ ಮರಳಿದ್ದರು.

ಇದಾದ ಕೆಲವೇ ಕ್ಷಣಗಳಲ್ಲಿ ಅವರು ಟೀಮ್ ಇಂಡಿಯಾದ ವೈದ್ಯಕೀಯ ಸಿಬ್ಬಂದಿಗಳೊಂದಿಗೆ ಕಾರಿನಲ್ಲಿ ತೆರಳಿದ್ದರು. ಆದರೆ ಹೋಗಿದೆಲ್ಲಿಗೆ ಅಥವಾ ಅವರಿಗೆ ಏನಾಗಿದೆ ಎಂಬುದರ ಮಾಹಿತಿ ಮಾತ್ರ ಹೊರಬಿದ್ದಿರಲಿಲ್ಲ. ಇದೀಗ ಜಸ್​ಪ್ರೀತ್ ಬುಮ್ರಾ ಅವರಿಗೆ ಏನಾಗಿತ್ತು ಎಂಬುದರ ಸ್ಪಷ್ಟ ಮಾಹಿತಿ ಸಿಕ್ಕಿದೆ.

ಭೋಜನಾ ವಿರಾಮದ ಬಳಿಕ ಓವರ್​ ಎಸೆದ ಜಸ್​ಪ್ರೀತ್ ಬುಮ್ರಾ ಬೆನ್ನು ನೋವಿನ ಸಮಸ್ಯೆಗೆ ಒಳಗಾಗಿದ್ದಾರೆ. ಅವರ ಬೆನ್ನಿನ ಸ್ನಾಯುವಿನಲ್ಲಿ ಸೆಳೆತ ಉಂಟಾಗಿದ್ದು, ಹೀಗಾಗಿ ಮುನ್ನೆಚ್ಚರಿಕೆಯ ಸಲುವಾಗಿ ಅವರು ಮೈದಾನದಿಂದ ಹೊರ ನಡೆದಿದ್ದಾರೆ. ಅದಕ್ಕೂ ಮುನ್ನ ವಿರಾಟ್ ಕೊಹ್ಲಿಗೆ ನಾಯಕತ್ವ ವಹಿಸಿಕೊಳ್ಳುವಂತೆ ತಿಳಿಸಿದ್ದಾರೆ.

ಇನ್ನು ಡ್ರೆಸ್ಸಿಂಗ್ ರೂಮ್​ಗೆ ತೆರಳಿದ ಬಳಿಕ ಜಸ್​ಪ್ರೀತ್ ಬುಮ್ರಾ ಅವರನ್ನು ಫಿಸಿಯೋ ಪರೀಕ್ಷಿಸಿದ್ದಾರೆ. ಅಲ್ಲದೆ ಸ್ಕ್ಯಾನಿಂಗ್​ಗಾಗಿ ಸಿಡ್ನಿಯ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಇದೀಗ ಆಸ್ಪತ್ರೆಯಿಂದ ಜಸ್​ಪ್ರೀತ್ ಬುಮ್ರಾ ಮರಳಿದ್ದು, ವೈದ್ಯಕೀಯ ತಂಡವು ಅವರನ್ನು ಮೇಲ್ವಿಚಾರಣೆ ಮಾಡುತ್ತಿದೆ.

ಜಸ್​ಪ್ರೀತ್ ಬುಮ್ರಾ ಅವರ ಸ್ಕ್ಯಾನಿಂಗ್ ರಿಪೋರ್ಟ್ ಇನ್ನಷ್ಟೇ ಬರಬೇಕಿದ್ದು, ಹೀಗಾಗಿ ಅವರು ಮೂರನೇ ದಿನದಾಟದಲ್ಲಿ ಕಣಕ್ಕಿಳಿಯಲಿದ್ದಾರಾ ಎಂಬುದೇ ಪ್ರಶ್ನೆ ಉದ್ಭವಿಸಿದೆ.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow