ಆಪರೇಷನ್ ಮಾಡಿಸಿಕೊಳ್ಳದೇ 'BGS' ಆಸ್ಪತ್ರೆಯಿಂದ ನಟ ದರ್ಶನ್ ಡಿಸ್ಚಾರ್ಜ್!

ಡಿಸೆಂಬರ್ 18, 2024 - 11:32
 0  14
ಆಪರೇಷನ್ ಮಾಡಿಸಿಕೊಳ್ಳದೇ 'BGS' ಆಸ್ಪತ್ರೆಯಿಂದ ನಟ ದರ್ಶನ್ ಡಿಸ್ಚಾರ್ಜ್!

ಕೊಲೆ ಕೇಸ್​​ನಲ್ಲಿ ಜೈಲು ಸೇರಿದ್ದ ನಟ ದರ್ಶನ್​ ಬೇಲ್​ ಪಡೆದು ಹೊರಗೆ ಬಂದಿದ್ದಾರೆ. ಪರಪ್ಪನ ಅಗ್ರಹಾರ ಜೈಲಿಂದ ಬಳ್ಳಾರಿ ಜೈಲಿಗೆ ದರ್ಶನ್​ ಶಿಫ್ಟ್ ಆದ ಬಳಿಕ ನಟನಿಗೆ ಬೆನ್ನು ನೋವು ಹೆಚ್ಚಾಗಿತ್ತು. ಬೆನ್ನು ನೋವಿನ ಕಾರಣ ಹೇಳಿ ದರ್ಶನ್ ಮಧ್ಯಂತರ ಜಾಮೀನು ಪಡೆದು ಹೊರಗೆ ಬಂದ್ರು. ಒಂದೂವರೆ ತಿಂಗಳಿಂದ ದರ್ಶನ್ ಆಸ್ಪತ್ರೆಯಲ್ಲೇ ಇದ್ದಾರೆ. ಡಿಸೆಂಬರ್ 13ರಂದು ಹೈಕೋರ್ಟ್ ದರ್ಶನ್ ಹಾಗೂ ಪವಿತ್ರಾ ಗೌಡ ಸೇರಿದಂತೆ ಕೆಲವರಿಗೆ ಜಾಮೀನು ಮಂಜೂರು ಮಾಡಿತ್ತು.

ಇದೀಗ ನಟ ದರ್ಶನ್ ಇಂದು ಕೆಂಗೇರಿಯ ಬಿಜಿಎಸ್ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆಗಿದ್ದಾರೆ. ಮನೆಯಲ್ಲಿ ನಟ ದರ್ಶನ್ ಅವರಿಗೆ ಯಾವ ರೀತಿ ಟ್ರೀಟ್ಮೆಂಟ್ ನೀಡುವುದು ಎನ್ನುವ ವಿಧಾನದ ಬಗ್ಗೆ ಕುಟುಂಬಸ್ಥರು ಮಾಹಿತಿ ಪಡೆದಿದ್ದಾರಂತೆ. ಆದ್ದರಿಂದ ಬೆನ್ನುನೋವಿಗೆ ಶಸ್ತ್ರಚಿಕಿತ್ಸೆ ಪಡೆಯದೇ 49 ದಿನಗಳ ನಂತರ ದರ್ಶನ್‌ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ದರ್ಶನ್‌ ಕುಟುಂಬ ಫಿಸಿಯೋಥೆರಪಿ ಮೂಲಕವೇ ಬೆನ್ನುನೋವು ಗುಣಪಡಿಸಿಕೊಳ್ಳುವ ಪ್ಲ್ಯಾನ್‌ ಮಾಡಿದೆ, ಹೀಗಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಿಸಿದ್ದಾರೆ. ಆಸ್ಪತ್ರೆಯ ಬಿಲ್‌ ಸೇರಿದಂತೆ, ಎಲ್ಲಾ ಪ್ರಕ್ರಿಯೆಗಳು ಮುಗಿಯುತ್ತಿದ್ದಂತೆ ದರ್ಶನ್‌ ತಮ್ಮ ಕಾರಿನಲ್ಲಿ ತೆರಳಿದ್ದಾರೆ.

ಬಳ್ಳಾರಿ ಜೈಲಿನಲ್ಲಿದ್ದ ನಟ ದರ್ಶನ್‌ಗೆ ಕಳೆದ ಅಕ್ಟೋಬರ್‌ 31ರಂದು ಹೈಕೋರ್ಟ್‌ 6 ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿತ್ತು. ಜಾಮೀನು ಪಡೆದ 2-3 ದಿನಗಳ ಬಳಿಕ ದರ್ಶನ್‌ ಆಸ್ಪತ್ರೆಗೆ ದಾಖಲಾದರೂ ಫಿಸಿಯೋಥೆರಪಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಹೇಳಲಾಗಿತ್ತು. ಇದಕ್ಕೆ ಸಂಬಂಧಿಸಿದಂತೆ ಫೋಟೋ ಸಹ ವೈರಲ್‌ ಆಗಿತ್ತು. ಇದೀಗ ಚಿಕಿತ್ಸೆ ಪಡೆಯದೇ ದರ್ಶನ್‌ ಡಿಸ್ಚಾರ್ಜ್‌ ಆಗಿದ್ದಾರೆ.

 

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow