'ಆಪರೇಷನ್ ಸಿಂಧೂರ್' ಕುರಿತು ಮೋದಿ ಪ್ರಶಂಸೆ: ನೆಹರೂ ವಿರುದ್ಧ ಅಮಿತ್ ಶಾ ವಾಗ್ದಾಳಿ

ನವದೆಹಲಿ: ಆಪರೇಷನ್ ಸಿಂಧೂರ್ ಕುರಿತು ಲೋಕಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿದ ವಿವರಾತ್ಮಕ ಭಾಷಣಕ್ಕೆ ಪ್ರಧಾನಿ ನರೇಂದ್ರ ಮೋದಿ ಪ್ರತಿಕ್ರಿಯೆ ನೀಡಿದ್ದಾರೆ. ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಈ ಆಪರೇಷನ್ಗಳು ಪ್ರಮುಖ ಪಾತ್ರವಹಿಸಿವೆ ಎಂದು ಅವರು ತಿಳಿಸಿದ್ದಾರೆ.
ಪ್ರಧಾನಿ ಮೋದಿ ತಮ್ಮ ಟ್ವೀಟ್ ಮೂಲಕ, “ಭದ್ರತೆ ಖಚಿತಪಡಿಸಿಕೊಳ್ಳುವ ನಿಟ್ಟಿನಲ್ಲಿ ಸರ್ಕಾರ ತೆಗೆದುಕೊಂಡಿರುವ ಕ್ರಮಗಳನ್ನು ಗೃಹ ಸಚಿವರು ತಮ್ಮ ಭಾಷಣದಲ್ಲಿ ವಿವರಿಸಿದ್ದಾರೆ. ಆಪರೇಷನ್ ಸಿಂಧೂರ್ ಮತ್ತು ಮಹಾದೇವ್ ದೇಶದ ಭದ್ರತೆಗೆ ಸಂಕೇತವಾದ ಹೆಜ್ಜೆಗಳಾಗಿವೆ,” ಎಂದು ಹೇಳಿದ್ದಾರೆ.
ಇದಕ್ಕೂ ಮೊದಲು ಲೋಕಸಭೆಯಲ್ಲಿ ಮಾತನಾಡಿದ ಅಮಿತ್ ಶಾ, ಆಪರೇಷನ್ ಸಿಂಧೂರ್ ಹಾಗೂ ಮಹಾದೇವ್ ಬಗ್ಗೆ ವಿವರಣೆ ನೀಡಿದರು. ದೇಶದ ಭದ್ರತೆಗಾಗಿ ಕೇಂದ್ರ ಸರ್ಕಾರ ಕೈಗೊಂಡಿರುವ ಕ್ರಮಗಳನ್ನೂ ಅವರು ವಿವರಿಸಿದರು. ಜೊತೆಗೆ ಪಾಕ್ ಆಕ್ರಮಿತ ಕಾಶ್ಮೀರ (PoK) ವಿಚಾರದಲ್ಲಿ ಮಾಜಿ ಪ್ರಧಾನಮಂತ್ರಿ ಜವಾಹರಲಾಲ್ ನೆಹರೂ ಅವರ ನಿರ್ಧಾರಗಳನ್ನು ಗೃಹ ಸಚಿವರು ತೀವ್ರವಾಗಿ ಟೀಕಿಸಿದರು.
ಅವರು 1948ರಲ್ಲಿ ಭಾರತೀಯ ಸೇನೆ PoK ವಶಪಡಿಸಿಕೊಳ್ಳುವ ಸ್ಥಿತಿಯಲ್ಲಿ ಇದ್ದರೂ, ನೆಹರೂ ಅವರ ಏಕಪಕ್ಷೀಯ ಕದನ ವಿರಾಮದಿಂದಾಗಿ ಆ ಅವಕಾಶ ಕೈ ತಪ್ಪಿದೆಯೆಂದು ಆರೋಪಿಸಿದರು. ಸರ್ದಾರ್ ವಲ್ಲಭಭಾಯಿ ಪಟೇಲ್ ಕೂಡ ಈ ನಿರ್ಧಾರವನ್ನು ವಿರೋಧಿಸಿದ್ದರು ಎಂದು ಅವರು ಉಲ್ಲೇಖಿಸಿದರು.
ಇದೇ ವೇಳೆ, ಭದ್ರತಾ ಮಂಡಳಿಯ ಶಾಶ್ವತ ಸದಸ್ಯತ್ವದ ವಿಷಯದಲ್ಲಿ ಭಾರತ ಹಿಂದಿಕ್ಕಿರುವುದಕ್ಕೂ ನೆಹರೂ ಅವರೇ ಕಾರಣ ಎಂದು ಶಾ ವಾಗ್ದಾಳಿ ನಡೆಸಿದರು. “ಈ ದಿನಗಳ ಸರ್ಕಾರ, ಮನಮೋಹನ್ ಸಿಂಗ್ ಅವರ ಸರ್ಕಾರವಲ್ಲ, ಮೋದಿ ಸರ್ಕಾರ” ಎಂದು ಅಮಿತ್ ಶಾ ಗಂಭೀರವಾಗಿ ಪ್ರತಿಪಾದಿಸಿದರು.
ನಿಮ್ಮ ಪ್ರತಿಕ್ರಿಯೆ ಏನು?






