ಆಪರೇಷನ್ ಸಿಂಧೂರ್ ಸಕ್ಸಸ್: ರಾಜ್ಯದ ಎಲ್ಲಾ ಮಸೀದಿಗಳಲ್ಲಿ ಪ್ರಾರ್ಥನೆ ಸಲ್ಲಿಸಲು ಜಮೀರ್ ಸೂಚನೆ

ಮೇ 8, 2025 - 16:02
 0  16
ಆಪರೇಷನ್ ಸಿಂಧೂರ್ ಸಕ್ಸಸ್: ರಾಜ್ಯದ ಎಲ್ಲಾ ಮಸೀದಿಗಳಲ್ಲಿ ಪ್ರಾರ್ಥನೆ ಸಲ್ಲಿಸಲು ಜಮೀರ್ ಸೂಚನೆ

ಬೆಂಗಳೂರು: ಪಹಲ್ಗಾಮ್​ ದಾಳಿಗೆ ಪ್ರತೀಕಾರವಾಗಿ ಭಾರತ ಆಪರೇಷನ್​ ಸಿಂಧೂರ್​ ಮೂಲಕ ಉಗ್ರರ ಹೆಡೆಮುರಿ ಕಟ್ಟಿದೆ. ಪಾಕಿಸ್ತಾನಕ್ಕೆ ತಕ್ಕ ಪಾಠ ಕಲಿಸಿದೆ. ಭಾರತೀಯ ಸೇನೆಯ ಕಾರ್ಯ ವೈಖರಿಯನ್ನು ಶ್ಲಾಘಿಸಲಾಗುತ್ತಿದೆ. ಜೊತೆಗೆ ಆಪರೇಷನ್​ ಸಿಂಧೂರ್​ ಸಕ್ಸಸ್​ ಆಗಿದ್ದಕ್ಕೆ, ಭಾರತೀಯ ಸೇನೆ ಒಳಿತಿಗೆ ಮತ್ತು ಯೋಧರಿಗೆ ಮತ್ತಷ್ಟ ಧೈರ್ಯ ತುಂಬಲು ರಾಜ್ಯದ ನಾನಾ ಕಡೆ ವಿಶೇಷ ಪೂಜೆ, ಪುನಸ್ಕಾರಗಳು ನಡೆಯುತ್ತಿದೆ. ಇದರ ಬೆನ್ನಲ್ಲೇ ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸುವಂತೆ ವಕ್ಫ್ & ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಸಂದೇಶ ರವಾನಿಸಿದ್ದಾರೆ.

ಭಾರತೀಯ ಸೇನೆಯ ಆಪರೇಷನ್ ಸಿಂಧೂರ ಕಾರ್ಯಾಚರಣೆಗೆ ಎಲ್ಲೆಡೆ ಪ್ರಶಂಸೆ ವ್ಯಕ್ತವಾಗುತ್ತಿದೆ. ಈ ನಿಟ್ಟಿನಲ್ಲಿ ನಮ್ಮ ದೇಶದ ಮೂರು ಸಶಸ್ತ್ರ ಪಡೆಗಳ ಸೈನಿಕರಿಗೆ ಕೃತಜ್ಞತೆ ಸಲ್ಲಿಸಲು ರಾಜ್ಯಾದ್ಯಂತ ಎಲ್ಲಾ ಮಸೀದಿಗಳಲ್ಲಿ ನಾಳೆ ಶುಕ್ರವಾರ ವಿಶೇಷ ಪ್ರಾರ್ಥನೆ ಸಲ್ಲಿಸುವಂತೆ ಸಚಿವ ಬಿ ಝಡ್ ಜಮೀರ್ ಅಹ್ಮದ್ ಅವರು ವಕ್ಫ್ ಬೋರ್ಡ್ ಸಿಇಒಗೆ ಪತ್ರದ ಮೂಲಕ ಸೂಚನೆ ನೀಡಿದ್ದಾರೆ.

ಪಹಲ್ಗಾಮ್​ನಲ್ಲಿ ಉಗ್ರರ ದಾಳಿ ಹಿನ್ನೆಲೆ ‘ಆಪರೇಷನ್ ಸಿಂಧೂರ’ ಕಾರ್ಯಾಚರಣೆ ನಡೆಸಿ ದೇಶ ರಕ್ಷಣೆಯಲ್ಲಿ ತೊಡಗಿರುವ ಭಾರತದ ಸೈನಿಕರ ಶ್ರೇಯಸ್ಸು ಮತ್ತು ಶಕ್ತಿ ತುಂಬಲು ವಕ್ಫ್ ಬೋರ್ಡ್ ವ್ಯಾಪ್ತಿಯ ಮಸೀದಿಗಳು ಸೇರಿ ಎಲ್ಲಾ ಮಸೀದಿಗಳಲ್ಲಿ ನಾಳೆ ಶುಕ್ರವಾರ ವಿಶೇಷ ಪ್ರಾರ್ಥನೆ ಸಲ್ಲಿಸುವಂತೆ ತಿಳಿಸಲಾಗಿದೆ.

ರಾಜ್ಯದ ಮುಜುರಾಯಿ ಇಲಾಖೆಗೆ ಒಳಪಡುವ ದೇವಸ್ಥಾನಗಳಲ್ಲಿ ಭಾರತೀಯ ಸೇನೆ ಹೆಸರಲ್ಲಿ ವಿಶೇಷ ಪೂಜೆ ಸಲ್ಲಿಸುವಂತೆ ಸುತ್ತೋಲೆ ಹೊರಬಿದ್ದ ಬೆನ್ನಲ್ಲೇ ಮಸ್ಲಿಮರಿಗೂ ಸಹ ಮಸೀದಿಗಳಲ್ಲಿ ವಿಶೇಷ ಪೂಜೆ ಸಲ್ಲಿಸಲು ಹೇಳಬೇಕೆಂಬ ಕೂಗು ಕೇಳಿಬಂದಿದ್ದವು. ಇದರ ಬೆನ್ನಲ್ಲೇ ಇದೀಗ ಸಚಿವ ಜಮೀರ್ ಅಹ್ಮದ್ ಖಾನ್ ಸೂಚನೆ ನೀಡಿದ್ದಾರೆ.

 

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow